Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ದಿಲ್ಲದೇ ವಿದೇಶಕ್ಕೆ ಹಾರುತ್ತಿದೆ ಕನ್ನಡದ 'ಶುದ್ಧಿ'
ಶೋಷಿತ ಸಮಾಜವನ್ನು ಶುದ್ಧೀಕರಿಸುವ ಹಿನ್ನೆಲೆಯಲ್ಲಿ 2016 ರಿಂದ ಹಲವು ಚಿತ್ರಗಳು ಕನ್ನಡ ಚಿತ್ರರಂಗದಲ್ಲಿ ತೆರೆಕಂಡಿವೆ. ಉತ್ತಮ ನಿರೂಪಣೆ, ಚಿತ್ರಕಥೆಯಲ್ಲಿ ಗಟ್ಟಿತನ ಇದ್ದರೇ ಯಾರು ಬೇಕಾದರೂ ಸಿನಿಮಾ ಮಾಡಿ ಗೆಲ್ಲಬಹುದು ಎಂಬುದನ್ನು ಹಲವು ಇತ್ತೀಚಿನ ಕನ್ನಡ ಸಿನಿಮಾಗಳು ಸಾಭೀತುಪಡಿಸಿವೆ. ಅಂತಹ ಸಿನಿಮಾಗಳ ಸಾಲಿನಲ್ಲಿ ಪ್ರೇಕ್ಷಕರ ಮನಗೆದ್ದ ಇತ್ತೀಚಿನ ಚಿತ್ರಗಳಲ್ಲಿ 'ಶುದ್ಧಿ' ಸಹ ಒಂದು.[ವಿಮರ್ಶೆ: ಶೋಷಿತ ಸಮಾಜವನ್ನು 'ಶುದ್ಧಿ'ಕರಿಸುವ ಮಹಿಳೆಯ ನಿಗೂಢ ಪಯಣ]
ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ಆದರ್ಶ್ ಎಚ್.ಈಶ್ವರಪ್ಪ ನಿರ್ದೇಶನದಲ್ಲಿ ಮೂಡಿಬಂದ 'ಶುದ್ಧಿ' ಚಿತ್ರವು ಅತ್ಯುತ್ತಮ ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರವು ಚೊಚ್ಚಲ ನಿರ್ದೇಶಕ ಆದರ್ಶ್ ಅವರಿಗೆ ಹೆಸರು ಗಳಿಕೆ ಜೊತೆಗೆ ಬಾಕ್ಸ್ ಆಫೀಸ್ ಗಳಿಕೆಯಲ್ಲೂ ಯಶಸ್ವಿ ನೀಡಿದೆ. ಇದೇ ಚಿತ್ರವೀಗ ಅಮೆರಿಕದಲ್ಲಿ ತೆರೆಕಾಣಲು ಸಜ್ಜಾಗಿದೆ.
ಅಮೆರಿಕ ಮೂಲದ ಲಾರೆನ್ ಸ್ಟಾರ್ಟನೊ ಮುಖ್ಯ ಭೂಮಿಕೆಯಲ್ಲಿನ ಅಭಿನಯ, ಹಾಲಿವುಡ್ ಮೂಲದ ಆಂಡ್ರೂ ಆಯಿಲೋ ಛಾಯಾಗ್ರಹಣ ಮತ್ತು ಜೆಸ್ಸಿ ಕ್ಲಿಂಟನ್ ಅವರ ಸಂಗೀತ ನಿರ್ದೇಶನ ಇರುವ 'ಶುದ್ಧಿ' ಬಹುತೇಕ ಹಾಲಿವುಡ್ ಶೈಲಿಯಲ್ಲಿಯೇ ಮೂಡಿಬಂದಿದ್ದು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಹಾಗಾಗಿ ಈಗ ಅಮೆರಿಕದಲ್ಲಿ ಸಿನಿಮಾ ಪ್ರದರ್ಶನಕ್ಕೆ ಬೇಡಿಕೆ ಹೆಚ್ಚಿದ್ದು, ಅಲ್ಲಿನ ಖಾಸಗಿ ಸಂಸ್ಥೆಯೊಂದು ಚಿತ್ರ ಪ್ರದರ್ಶನ ಮಾಡಲು ಮುಂದಾಗಿದೆಯಂತೆ. ಆದ್ದರಿಂದ ನಿರ್ದೇಶಕ ಆದರ್ಶ್ ಎಚ್.ಈಶ್ವರಪ್ಪ ಏಪ್ರಿಲ್ 20 ರ ನಂತರ ಅಮೆರಿಕದ 40 ಪ್ರಮುಖ ಪ್ರದೇಶಗಳಲ್ಲಿ ಚಿತ್ರ ಪ್ರದರ್ಶನ ಮಾಡಲಿದ್ದು, ಯೂರೋಪ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಕೆಲವು ಕಡೆ ಸ್ಕ್ರೀನಿಂಗ್ ಮಾಡುವ ಯೋಜನೆ ಹೊಂದಿದ್ದಾರಂತೆ.[ಶುದ್ಧ ಸಮಾಜಕ್ಕಾಗಿ ಸಂದೇಶ ನೀಡಿದ 'ಶುದ್ಧಿ'ಗೆ ಬೆನ್ನುತಟ್ಟಿದ ವಿಮರ್ಶಕರು]
ನಿವೇದಿತಾ, ಲಾರೆನ್ ಸ್ಟಾರ್ಟನೊ, ಅಮೃತಾ ಕರಗದ ಅವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಈ ಸಿನಿಮಾವನ್ನು ನಂದಿನಿ ಮಾದೇಶ್ ಮತ್ತು ಮಾದೇಶ್ ಟಿ ಭಾಸ್ಕರ್ ನಿರ್ಮಾಣ ಮಾಡಿದ್ದರು. ಮಾರ್ಚ್ 17 ರಂದು ತೆರೆಕಂಡಿರುವ ಈ ಚಿತ್ರನೋಡಿ ಸ್ಯಾಂಡಲ್ ವುಡ್ ನ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.