Don't Miss!
- Sports CSK vs LSG IPL 2024: ಚೆನ್ನೈನ ಚೆಪಾಕ್ ಕೋಟೆಯನ್ನು ಭೇದಿಸುವುದೇ ಲಕ್ನೋ?; ಸಂಭಾವ್ಯ ಆಡುವ 11ರ ಬಳಗ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಜೆಟ್ ನಲ್ಲಿ ಚಲನಚಿತ್ರ ಕ್ಷೇತ್ರಕ್ಕೆ ಸಿಹಿಕಹಿ ಕೊಡುಗೆ
ಈ ಬಾರಿ ಸಿದ್ದರಾಮಯ್ಯ ಮಂಡಿಸಿದ ಮುಂಗಡಪತ್ರದಲ್ಲಿ ಚಲನಚಿತ್ರ ಕ್ಷೇತ್ರಕ್ಕೆ ಒಂದಷ್ಟು ಸಿಹಿ ಇನ್ನೊಂದಿಷ್ಟು ಕಹಿ ಕೊಡುಗೆಯನ್ನು ನೀಡಿದ್ದಾರೆ. ಮೊದಲು ಕಹಿ ಬಳಿಕ ಸಿಹಿ ಬಗ್ಗೆ ತಿಳಿದುಕೊಳ್ಳೋಣ. ಸಿನಿಮಾ ಟಿಕೆಟ್ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಮೂಲಕ ಚಿತ್ರರಸಿಕರ ಕಿಸೆಗೆ ಒಂದಷ್ಟು ಹೊರೆ ಬಿದ್ದಿದೆ.
ಹವಾನಿಯಂತ್ರಣ ವ್ಯವಸ್ಥೆ ಇರುವ ಚಿತ್ರಮಂದಿರಗಳಲ್ಲಿ ಟಿಕೆಟ್ ಬೆಲೆ ರು.3 ಹೆಚ್ಚಳ ಹಾಗೂ ನಾನ್ ಎಸಿ ಚಿತ್ರಮಂದಿರಗಳಲ್ಲಿ ರು.2 ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಸರಿಸುಮಾರು 100 ಹಾಗೂ ರಾಜ್ಯದಾದ್ಯಂತ 600ಕ್ಕೂ ಹೆಚ್ಚು ಚಿತ್ರಮಂದಿರಳಿವೆ.
ಬೆಂಗಳೂರು ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಿರ್ಮಿಸುತ್ತಿರುವ ದಿವಂಗತ ಡಾ.ರಾಜ್ ಕುಮಾರ್ ಸ್ಮಾರದ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು ಇದನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು.
ದಿವಂಗತ ಡಾ.ವಿಷ್ಣುವರ್ಧನ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು ಇದರ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು.
ಕನ್ನಡ ವಾಕ್ ಚಲನಚಿತ್ರವು 75 ವರ್ಷಗಳನ್ನು ಪೂರೈಸಿರುವ ನೆನಪಿಗಾಗಿ ಬೆಂಗಳೂರಿನಲ್ಲಿ ನಿರ್ಮಿಸಲಾಗುತ್ತಿರುವ ಅಮೃತಮಹೋತ್ಸವ ಭವನದ ಬಾಕಿ ಕಾಮಗಾರಿಗಳನ್ನು ಪೂರೈಸಲು ಅನುಕೂಲವಾಗುವಂತೆ ರು.2.50 ಕೋಟಿ ಅನುದಾನ ಒದಗಿಸಲಾಗುವುದು. (ಒನ್ಇಂಡಿಯಾ ಕನ್ನಡ)