Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಈಗ' ನಿರ್ದೇಶಕ ರಾಜಮೌಳಿಗೆ ಮಾತೃ ವಿಯೋಗ
ರಾಜನಂದಿನಿ ಅವರ ಪತಿ ಹಾಗೂ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಬರಹಗಾರರಾಗಿ ಹಾಗೂ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಅದು ಯಾವುದೇ ಸಭೆ ಸಮಾರಂಭವಿರಲಿ ರಾಜಮೌಳಿ ಕುಟುಂಬಿಕರೆಲ್ಲಾ ಕಾಣಿಸಿಕೊಳ್ಳುತ್ತಿದ್ದರು. ಆದರೆ ರಾಜನಂದಿನಿ ಅವರು ಮಾತ್ರ ಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಇದಕ್ಕೆ ಅವರ ಅನಾರೋಗ್ಯವೇ ಕಾರಣ ಎನ್ನಲಾಗಿದೆ.
ಅವರ ತಾಯಿಯ ಅನಾರೋಗ್ಯದ ಕಾರಣ ರಾಜಮೌಳಿ ಅವರು ಇತ್ತೀಚೆಗೆ ಯಾವುದೇ ಚಿತ್ರೀಕರಣಕ್ಕೂ ಹಾಜರಾಗುತ್ತಿರಲಿಲ್ಲ. ತಮ್ಮ ತಾಯಿಯ ಅನಾರೋಗ್ಯದ ನೋವನ್ನು ಟ್ವಿಟ್ಟರ್ ನಲ್ಲಿ ಆಗಾಗ ತೋಡಿಕೊಂಡಿದ್ದರು ರಾಜಮೌಳಿ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೈದರಾಬಾದಿನ ಸನ್ ಶೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ತಿಂಗಳ ಚಿಕಿತ್ಸೆ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.
ಈ ಎರಡು ತಿಂಗಳ ಕಾಲ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. (ಏಜೆನ್ಸೀಸ್)