Don't Miss!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- News ಚಿಕ್ಕಬಳ್ಳಾಪುರದಲ್ಲಿ ಮತಭೇಟೆ ಆರಂಭ: ದೇವಾಂಗ ಮಠದ ದಯಾನಂದಪುರಿ ಸ್ವಾಮೀಜಿ ಭೇಟಿಯಾದ ಡಾ.ಕೆ. ಸುಧಾಕರ್
- Finance ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಐಟಿ ಕಂಪೆನಿಗಳನ್ನು ಕೇರಳಕ್ಕೆ ಆಹ್ವಾನಿಸಿದ ಸಚಿವ
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಬ್ಬರ್ ಶೇರ್ ಆಗಿ 'ರನ್ನ' ಬರ್ತಿದ್ದಾನೆ ದಾರಿಬಿಡಿ
'ರನ್ನ'ನ ರಂಗು ಸ್ಯಾಂಡಲ್ ವುಡ್ ನಲ್ಲಿ ನಿಧಾನಕ್ಕೆ ಶುರುವಾಗ್ತಿದೆ. ಕಿಚ್ಚನ "ಬಬ್ಬರ್ ಶೇರ್" ಹಾಡಿನ ತುಣುಕು ಯೂಟ್ಯೂಬ್ ನಲ್ಲಿ ಸೂಪರ್ ಹಿಟ್ಟಾಗಿದೆ. ರನ್ನನ ಮೇಕಿಂಗ್ ವಿಷಯದಲ್ಲಿ ಸ್ವತಃ ಸುದೀಪ್ ಮುತುವರ್ಜಿ ವಹಿಸಿದ್ದಾರೆ. ಹಾಗಾಗೀನೇ ಮೇಕಿಂಗ್ ಭರ್ಜರಿಯಾಗಿ ಮೂಡಿ ಬಂದಿದೆ.
ಬಿರುಗಾಳಿಯಂತೆ 'ರನ್ನ' ಥಿಯೇಟರ್ ಗಳಿಗೆ ಬರೋಕೆ ರೆಡಿಯಾಗಿದ್ದಾನೆ. ಮೇ 1ಕ್ಕೆ ರನ್ನನ ಎಂಟ್ರಿ ಬಹುತೇಕ ಖಚಿತ. ಕಾರ್ಮಿಕರ ದಿನಕ್ಕೆ ಸುದೀಪ್ ಅಂಡ್ ಟೀಂ ಚಿತ್ರವನ್ನ ತರೋಕೆ ಅಂತೀಮ ತಯಾರಿಯಲ್ಲಿದೆ. [ಊಹಾಪೋಹಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್]
ನಂದಕಿಶೋರ್ ನಿರ್ದೇಶನದ ಬಗ್ಗೆ ಕೂಡ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ವಿ ಹರಿಕೃಷ್ಣ ಹಾಡುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಹಿಂದೆ ಪವರ್ ಸ್ಟಾರ್ ಪುನೀತ್ ಅಭಿನಯದ 'ಅಣ್ಣಾಬಾಂಡ್' ಚಿತ್ರ 2012 ಮೇ 1ಕ್ಕೆ ಥಿಯೇಟರ್ ಗೆ ಎಂಟ್ರಿಕೊಟ್ಟಿತ್ತು.
ರನ್ನ ಚಿತ್ರಕ್ಕೆ 'ಬುಲ್ ಬುಲ್' ಖ್ಯಾತಿಯ ರಚಿತಾ ರಾಮ್ ನಾಯಕಿಯಾಗಿರುವ ಚಿತ್ರದಲ್ಲಿ ಅತ್ತೆ ಪಾತ್ರವನ್ನು "ಗೊಂಬೆ ಗೊಂಬೆ ಗೊಂಬೆ ನಿನ್ನ ಮುದ್ದಾಡಬೇಕು ನರಗೊಂಬೆ..." ಎಂದು ಕ್ರೇಜಿಸ್ಟಾರ್ ಜೊತೆ ಕುಣಿದಿದ್ದ ಮಧು ಅತ್ತೆ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಸರಿಸುಮಾರು ರು.20 ಕೋಟಿ ಬಜೆಟ್ ನಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ ಎಂ ಚಂದ್ರಶೇಖರ್. ಚಿತ್ರದ ಮುಖ್ಯಪಾತ್ರಗಳಲ್ಲಿ ದೇವರಾಜ್ ಹಾಗೂ ಪ್ರಕಾಶ್ ರೈ ಸಹ ಇದ್ದು ವಿ ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದೆ. ಸುಧಾಕರ್ ಎಸ್ ರಾಜು ಅವರ ಛಾಯಾಗ್ರಹಣ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ. ಕಾರ್ಮಿಕರ ದಿನವನ್ನ ಎನ್ ಕ್ಯಾಶ್ ಮಾಡಿಕೊಳ್ಳೋಕೆ ಸುದೀಪ್ ಅಂಡ್ ಟೀಂ ರೆಡಿಯಾಗಿದೆ, ಸಿನಿಮಾ ನೋಡೋಕೆ ರೆಡಿಯಾಗಿ.