Don't Miss!
- News Lok Sabha Election 2024: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಕಾರಣ-ಎಚ್ಡಿಕೆ
- Sports ಪಾಕಿಸ್ತಾನ್ ಸ್ಮೋಕಿಂಗ್ ಲೀಗ್; PSL ಫೈನಲ್ನಲ್ಲಿ ಬೀಡಿ ಸೇದಿದ ಇಮಾದ್ ವಾಸಿಮ್; ವಿಡಿಯೋ ವೈರಲ್
- Lifestyle ಮೂರು ಮಕ್ಕಳು ನನ್ನದ್ದಲ್ಲ ಎಂದು ಆತನಿಗೆ ತಿಳಿದಾಗ.... ಹೆಂಡತಿಯ ಮಹಾಮೋಸ
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಬ್ಬರ್ ಶೇರ್ ಆಗಿ 'ರನ್ನ' ಬರ್ತಿದ್ದಾನೆ ದಾರಿಬಿಡಿ
'ರನ್ನ'ನ ರಂಗು ಸ್ಯಾಂಡಲ್ ವುಡ್ ನಲ್ಲಿ ನಿಧಾನಕ್ಕೆ ಶುರುವಾಗ್ತಿದೆ. ಕಿಚ್ಚನ "ಬಬ್ಬರ್ ಶೇರ್" ಹಾಡಿನ ತುಣುಕು ಯೂಟ್ಯೂಬ್ ನಲ್ಲಿ ಸೂಪರ್ ಹಿಟ್ಟಾಗಿದೆ. ರನ್ನನ ಮೇಕಿಂಗ್ ವಿಷಯದಲ್ಲಿ ಸ್ವತಃ ಸುದೀಪ್ ಮುತುವರ್ಜಿ ವಹಿಸಿದ್ದಾರೆ. ಹಾಗಾಗೀನೇ ಮೇಕಿಂಗ್ ಭರ್ಜರಿಯಾಗಿ ಮೂಡಿ ಬಂದಿದೆ.
ಬಿರುಗಾಳಿಯಂತೆ 'ರನ್ನ' ಥಿಯೇಟರ್ ಗಳಿಗೆ ಬರೋಕೆ ರೆಡಿಯಾಗಿದ್ದಾನೆ. ಮೇ 1ಕ್ಕೆ ರನ್ನನ ಎಂಟ್ರಿ ಬಹುತೇಕ ಖಚಿತ. ಕಾರ್ಮಿಕರ ದಿನಕ್ಕೆ ಸುದೀಪ್ ಅಂಡ್ ಟೀಂ ಚಿತ್ರವನ್ನ ತರೋಕೆ ಅಂತೀಮ ತಯಾರಿಯಲ್ಲಿದೆ. [ಊಹಾಪೋಹಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್]
ನಂದಕಿಶೋರ್ ನಿರ್ದೇಶನದ ಬಗ್ಗೆ ಕೂಡ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ವಿ ಹರಿಕೃಷ್ಣ ಹಾಡುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಹಿಂದೆ ಪವರ್ ಸ್ಟಾರ್ ಪುನೀತ್ ಅಭಿನಯದ 'ಅಣ್ಣಾಬಾಂಡ್' ಚಿತ್ರ 2012 ಮೇ 1ಕ್ಕೆ ಥಿಯೇಟರ್ ಗೆ ಎಂಟ್ರಿಕೊಟ್ಟಿತ್ತು.
ರನ್ನ ಚಿತ್ರಕ್ಕೆ 'ಬುಲ್ ಬುಲ್' ಖ್ಯಾತಿಯ ರಚಿತಾ ರಾಮ್ ನಾಯಕಿಯಾಗಿರುವ ಚಿತ್ರದಲ್ಲಿ ಅತ್ತೆ ಪಾತ್ರವನ್ನು "ಗೊಂಬೆ ಗೊಂಬೆ ಗೊಂಬೆ ನಿನ್ನ ಮುದ್ದಾಡಬೇಕು ನರಗೊಂಬೆ..." ಎಂದು ಕ್ರೇಜಿಸ್ಟಾರ್ ಜೊತೆ ಕುಣಿದಿದ್ದ ಮಧು ಅತ್ತೆ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಸರಿಸುಮಾರು ರು.20 ಕೋಟಿ ಬಜೆಟ್ ನಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ ಎಂ ಚಂದ್ರಶೇಖರ್. ಚಿತ್ರದ ಮುಖ್ಯಪಾತ್ರಗಳಲ್ಲಿ ದೇವರಾಜ್ ಹಾಗೂ ಪ್ರಕಾಶ್ ರೈ ಸಹ ಇದ್ದು ವಿ ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದೆ. ಸುಧಾಕರ್ ಎಸ್ ರಾಜು ಅವರ ಛಾಯಾಗ್ರಹಣ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿದೆ. ಕಾರ್ಮಿಕರ ದಿನವನ್ನ ಎನ್ ಕ್ಯಾಶ್ ಮಾಡಿಕೊಳ್ಳೋಕೆ ಸುದೀಪ್ ಅಂಡ್ ಟೀಂ ರೆಡಿಯಾಗಿದೆ, ಸಿನಿಮಾ ನೋಡೋಕೆ ರೆಡಿಯಾಗಿ.