Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಂತಿಗೆ ಧಕ್ಕೆ:ವಿದೇಶದಲ್ಲಿ ಭಾರತೀಯ ನಟನ ಬಂಧನ
ಪ್ರವಾಸಿ ವೀಸಾದ ಮೂಲಕ ದೇಶ ಪ್ರವೇಶಿಸಿ ನಂತರ ಅಲ್ಲಿ ಶಾಂತಿ ಕದಡುವ ಕೆಲಸಕ್ಕೆ ಮುಂದಾಗಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರತೀಯ ಮೂಲದ ನಟನೊಬ್ಬರನ್ನು ವಿದೇಶಿ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ಮೂಲದ ಮತ್ತು ಸದ್ಯ ನಾರ್ವೇ ದೇಶದ ಪ್ರಜೆಯಾಗಿರುವ ತಮಿಳು ಕವಿ ಮತ್ತು ನಟ ವಿಐಎಸ್ ಜೇಯಪಾಲನ್ ಅವರನ್ನು ಶ್ರೀಲಂಕಾದಲ್ಲಿ ಬಂಧಿಸಲಾಗಿದೆ. ಶುಕ್ರವಾರ (ನ 22) ತಡರಾತ್ರಿ ಜೇಯಪಾಲನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ವೀಸಾ ಉಲ್ಲಂಘನೆಯ ಕಾರಣಕ್ಕಾಗಿ ಜೇಯಪಾಲನ್ ಅವರು ಬಂಧನಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿದ್ದರೂ, ಪ್ರವಾಸಿ ವೀಸಾದ ಮೂಲಕ ಶ್ರೀಲಂಕಾ ಪ್ರವೇಶಿಸಿರುವ ಇವರು ಶಾಂತಿ ಕದಡುವ ಯತ್ನಕ್ಕೆ ಮುಂದಾಗಿದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ಪೊಲೀಸರು ಹೇಳಿದ್ದಾರೆ.
ಪ್ರವಾಸಿ ವೀಸಾದ ಮೂಲಕ ಜೇಯಪಾಲನ್ ಶ್ರೀಲಂಕಾ ಪ್ರವೇಶಿಸಿದ್ದರು. ಆದರೆ ಅವರು ಜಾಫ್ನಾದಲ್ಲಿ ಸಮ್ಮೇಳನ ಆಯೋಜಿಸಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸಕ್ಕೆ ಮುಂದಾಗಿದ್ದರಿಂದ ಅವರನ್ನು ದೇಶದ ಉತ್ತರ ಭಾಗದ ಮಂಕುಲಾಮ್ ನಲ್ಲಿ ಬಂಧಿಸಲಾಗಿದೆ ಎಂದು ಸರಕಾರದ ವಕ್ತಾರ ಅಜಿತ್ ರೋಹಾನ ಹೇಳಿದ್ದಾರೆ.
79 ವರ್ಷದ ಮತ್ತು ಶ್ರೀಲಂಕಾದ ಜಾಫ್ನಾದಲ್ಲಿ ಹುಟ್ಟಿದ್ದ ಜೇಯಪಾಲನ್ ಓಸ್ಲೋ ನಗರದ ವಾಸಿಯಾಗಿದ್ದು ಹಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.
ತಮಿಳಿನಲ್ಲಿ ಹಲವು ಕವಿತೆಗಳನ್ನು ರಚಿಸಿರುವ ಜೇಯಪಾಲನ್ ಅವರು ಆದುಕಲಾಂ ಚಿತ್ರದ ನಟನೆಗಾಗಿ ರಾಷ್ಟ್ರಪ್ರಶಸ್ತಿ ಕೂಡಾ ಪಡೆದಿದ್ದರು.
ಶ್ರೀಲಂಕಾ ಪೊಲೀಸರು ಬಂಧನದ ಕ್ರಮವನ್ನು ಸಮರ್ಥಿಸಿ ಕೊಂಡಿದ್ದಾರೆ.