Don't Miss!
- News ‘ದೇಶ ಸುರಕ್ಷಿತವಾಗಿರಲು ನರೇಂದ್ರ ಮೋದಿ ಅವರೇ ಪ್ರಧಾನಿ ಆಗಬೇಕು!’
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡಿಸುವ 'ಮೃಗಶಿರ'
ಇದೊಂದು ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡಿಸುವ ಚಿತ್ರ. ಅದ್ಯಾವುದು ಆ ಚಿತ್ರ ಎಂದು ನಿಮಗೆ ಅಚ್ಚರಿಯಾಗಬಹುದು. ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ 'ಮೃಗಶಿರ' ಚಿತ್ರವೇ ರೋಮಾಂಚಭರಿತ ಸಿನಿಮಾ.
ನಕ್ಸಲ್ ಸಮಸ್ಯೆಯಿಂದ ಕರ್ನಾಟಕದ ಪ್ರಕ್ಷುಬ್ದ ಪ್ರದೇಶ ಎನಿಸಿಕೊಂಡಿರುವ ತೊಬ್ಬೆಟ್ಟು ಅರಣ್ಯ ಪ್ರದೇಶ, ಕುಂದಾಪುರ ಬಳಿ ಬಹುತೇಕ ಚಿತ್ರೀಕರಣ ಮಾಡಿರುವ 'ಮೃಗಶಿರ' ಚಿತ್ರಕ್ಕೆ ಆಕಾಶ್ ಸ್ಟುಡಿಯೋದಲ್ಲಿ ಡಿ ಟಿ ಎಸ್ ಕೆಲಸವನ್ನು ಪೂರ್ತಿಗೊಳಿಸಲಾಗಿದೆ. [ನೀನಾದೆನಾ ಚಿತ್ರ ವಿಮರ್ಶೆ]
'ಮೃಗಶಿರ' ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ಪನ್ನಗಾ ಭರಣ, ತಬಲಾ ನಾಣಿ ಅರಣ್ಯ ಪ್ರದೇಶಕ್ಕೆ ಆಗಮಿಸಿದಾಗ ಆಗುವ ಘಟನೆಗಳು ಬಹಳ ಕುತೂಹಲಕಾರಿಯಾಗಿ ಮೂಡಿಬಂದಿದೆಯಂತೆ. ಮಾನಸ 'ರೊಮಾನ್ಸ್' ಎನ್ನುವ ತೆಲುಗು ಸಿನಿಮಾದಲ್ಲಿ ಅಭಿನಯಿಸಿ ಈಗ ಕನ್ನಡದ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ಕೃಷ್ಣ ಮೋಹನ್, ಸಿದ್ದರಾಜ ಕಲ್ಯಾಣ್ಕರ್, ಸಾಧು ಕೋಕಿಲ ಹಾಗೂ ಇನ್ನಿತರರು ತಾರಾಗಣದಲ್ಲಿ ಇದ್ದಾರೆ. ಶ್ರೀಕಾಂತ್ ಅವರ ಸಂಭಾಷಣೆ, ರವಿ ಬಸ್ರೂರ್ ಅವರ ಸಂಗೀತ, ಶ್ರೀನಿವಾಸ್ ರಾಮಯ್ಯ ಅವರ ಛಾಯಾಗ್ರಹಣ ಈ ಚಿತಕ್ಕಿದೆ. (ಫಿಲ್ಮಿಬೀಟ್ ಕನ್ನಡ)