Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಂಪತ್ಯ ಜೀವನದ ಹೊಸ್ತಿಲಲ್ಲಿ ತುಳು ನಟ ಅರ್ಜುನ್ ಕಾಪಿಕಾಡ್
ತುಳು ಚಿತ್ರರಂಗದ ಖ್ಯಾತ ನಟ ದೇವದಾಸ್ ಕಾಪಿಕಾಡ್ ಅವರ ಪುತ್ರ ಅರ್ಜುನ್ ಕಾಪಿಕಾಡ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ.
ಹೌದು ಕೋಸ್ಟಲ್ ವುಡ್ ನ ಆಕ್ಷನ್-ಕಿಂಗ್ ನಟ ಅರ್ಜುನ್ ಕಾಪಿಕಾಡ್ ಅವರು ತಮ್ಮ ಕಾಲೇಜು ದಿನಗಳಿಂದ ಪರಿಚಯವಿದ್ದ ಗೆಳತಿ ಕಾವ್ಯ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.[ತುಳುನಾಡಿನಲ್ಲೇ ತುಳು ಸಿನೆಮಾ ಪ್ರದರ್ಶನಕ್ಕೆ ಕಂಟಕ]
ಮೇ 29, ಭಾನುವಾರದಂದು ನಟ ಅರ್ಜುನ್ ಕಾಪಿಕಾಡ್ ಅವರು ಗೆಳತಿ ಕಾವ್ಯ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಗಳೂರಿನ ದೀಪಾ ಕಂಫರ್ಟ್ಸ್ ನಲ್ಲಿ ಜರುಗಿದ ನಿಶ್ಚಿತಾರ್ಥದ ಸಂಭ್ರಮದ ಸಮಾರಂಭದಲ್ಲಿ ತುಳು ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು.[ಚಿತ್ರಗಳಲ್ಲಿ: ಅದ್ದೂರಿಯಾಗಿ ನೆರವೇರಿದ 'Red FM ತುಳು ಫಿಲ್ಮ್ ಅವಾರ್ಡ್']
ತುಳು ನಟರಾದ ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ಪ್ರಕಾಶ್ ಪಾಂಡೇಶ್ವರ್, ರಾಮ್ ದಾಸ್ ಸಸಿಹಿತ್ಲು, ಪತ್ರಕರ್ತ ಮನೋಹರ್ ಪ್ರಸಾದ್ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಂಧು-ಬಾಂಧವರು ಮತ್ತು ಗಣ್ಯರನ್ನು ಕಾಪಿಕಾಡ್ ದಂಪತಿ, ದೇವದಾಸ್ ಕಾಪಿಕಾಡ್ ಮತ್ತು ಶರ್ಮಿಳಾ ಕಾಪಿಕಾಡ್ ಅವರು ಸಂಭ್ರಮದಿಂದ ಬರಮಾಡಿಕೊಂಡಿದ್ದರು.[ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ನಟಿ ಪ್ರಿಯಾಮಣಿ]
'ರಂಗ್', 'ದಂಡ್', 'ಚಂಡಿಕೋರಿ' ಮುಂತಾದ ಸಿನಿಮಾಗಳಲ್ಲಿ ಮಿಂಚಿದ್ದ ನಟ ಅರ್ಜುನ್ ಕಾಪಿಕಾಡ್ ಅವರು ಸದ್ಯಕ್ಕೆ ತಮ್ಮ ಮುಂಬರುವ ಸಿನಿಮಾ 'ಬರ್ಸ' ಚಿತ್ರದ ಚಿತ್ರೀಕರಣ ಸಂಪೂರ್ಣಗೊಳಿಸಿದ್ದಾರೆ. ಇವರು 'ಮಧುರ ಸ್ವಪ್ನ' ಎಂಬ ಕನ್ನಡ ಚಿತ್ರದಲ್ಲಿ ಕೂಡ ಮಿಂಚಿದ್ದರು.