Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳುನಾಡಿಗೆ ರಾಷ್ಟ್ರ ಪ್ರಶಸ್ತಿ ತಂದಿಟ್ಟ 'ಮದಿಪು'
2016 ನೇ ಸಾಲಿನ ಪ್ರತಿಷ್ಟಿತ 64ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಚೇತನ್ ಮುಂಡಾಡಿ ನಿರ್ದೇಶನದ 'ಮದಿಪು' ಅತ್ಯುತ್ತಮ ತುಳು ಚಿತ್ರ (ಪ್ರಾದೇಶಿಕ) ಪ್ರಶಸ್ತಿ ಪಡೆದುಕೊಂಡಿದೆ.
ಕರಾವಳಿ ಜನತೆಯ ಬದುಕು, ಅಲ್ಲಿನ ಆಚಾರ-ವಿಚಾರ, ಧರ್ಮ, ಭೂತಾರಾಧನೆಯ ಸುತ್ತ ಮದಿಪು ಚಿತ್ರದ ಕತೆ ಹೆಣೆಯಲಾಗಿದೆ. ತುಳುನಾಡಿನ ಕಲಾತ್ಮಕ ಚಿತ್ರಕ್ಕೆ ಚೇತನ್ ಮುಂಡಾಡಿ ಆಕ್ಷನ್ ಕಟ್ ಹೇಳಿದ್ದು ಇದು ಇವರ ಚೊಚ್ಚಲ ಸಿನಿಮಾ.
ಎಂ.ಕೆ.ಮಠ, ಸರ್ದಾರ್ ಸತ್ಯ ಹಾಗೂ ಸುಜಾತಾ ಶೆಟ್ಟಿ ಪೇರಾಜೆ ಚಿತ್ರದಲ್ಲಿ ಕೋಲ ಕಟ್ಟುವ ಜನಾಂಗದ ಪಾತ್ರ ನಿರ್ವಹಿಸಿದ್ದಾರೆ. ಫಾತಿಮಾ ಪಾತ್ರದಲ್ಲಿ ಸೀತಾ ಕೋಟೆ, ವೈದ್ಯನ ಪಾತ್ರದಲ್ಲಿ ದಯಾನಂದ್ ಕತ್ತಲ್ ಸರ್ ಅವರು ಅಭಿನಯಿಸಿದ್ದಾರೆ. ಇವರೆಲ್ಲರ ಅಭಿನಯ ತುಳು ಚಿತ್ರರಂಗಕ್ಕೆ ಮತ್ತಷ್ಟು ಭರವಸೆ ಮೂಡಿಸಿದೆ.
ಚಿತ್ರಕ್ಕೆ ಜೋಗಿ ಸಂಭಾಷಣೆ ಬರೆದಿದ್ದು ಅದಕ್ಕೆ ಚಂದ್ರನಾಥ್ ಬಜಗೋಳಿ ತುಳು ಸಂಭಾಷಣೆಯನ್ನು ಬರೆದಿದ್ದಾರೆ. ವಿ.ಮನೋಹರ್ ಸಂಗೀತವನ್ನು ನೀಡಿದ್ದಾರೆ. ಸುಧೀರ್ ಶಾನ್ ಬೋಗ್ ಅವರ ಕ್ರಿಯಾತ್ಮಕ ನಿರ್ದೇಶನ ಚಿತ್ರದಲ್ಲಿ ಎದ್ದು ಕಾಣುತ್ತದೆ. ಸಂದೀಪ್ ಕುಮಾರ್ ನಂದಳಿಕೆ ನಿರ್ಮಾಣದಲ್ಲಿ ಶರತ್ ಕುಮಾರ್ ಮತ್ತು ವಿಶಾಲ್ ಕುಮಾರ್ ಸಹ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದೆ.
ವಿಶೇಷ ಅಂದ್ರೆ, 'ಮದಿಪು' ಚಿತ್ರ ಇತ್ತಿಚೆಗಷ್ಟೇ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೂಡ ಪ್ರದರ್ಶನವಾಗಿತ್ತು.