Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರೇಕಿಂಗ್ ನ್ಯೂಸ್; 'ಕರ್ವ' ಚಿತ್ರದಲ್ಲಿ 'ಹೀಗೂ ಉಂಟೇ.!'
ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಹುಟ್ಟುಹಾಕಿರುವ 'ಕರ್ವ' ಚಿತ್ರದ ಬಗ್ಗೆ ನಿಮ್ಮ 'ಫಿಲ್ಮಿಬೀಟ್ ಕನ್ನಡ' ಒಂದು ಎಕ್ಸ್ ಕ್ಲೂಸಿವ್ ಸುದ್ದಿಯನ್ನ ನಿಮಗಾಗಿ ಹೊತ್ತು ತಂದಿದೆ.
ಕರ್ನಾಟಕದ ಜನಪ್ರಿಯ ಸುದ್ದಿ ವಾಹಿನಿ 'ಟಿವಿ9' ನಲ್ಲಿ ಪ್ರಸಾರವಾಗುವ 'ಹೀಗೂ ಉಂಟೇ.!' ಕಾರ್ಯಕ್ರಮವನ್ನ ನೀವೆಲ್ಲಾ ನೋಡಿದ್ದೀರಾ ತಾನೇ..?
ಭೂತ, ಪ್ರೇತ, ನಂಬಿಕೆ, ಅಪನಂಬಿಕೆ, ದೇವರು, ಅಗೋಚರ ಶಕ್ತಿಗಳ ಸುತ್ತ ಹುಟ್ಟಿಕೊಳ್ಳುವ ವಿಶಿಷ್ಟ ಬಗೆಯ ಘಟನೆಗಳನ್ನು ತಿಳಿಸುವ ಕಾರ್ಯಕ್ರಮ 'ಹೀಗೂ ಉಂಟೇ.!'. ತರ್ಕಕ್ಕೆ ನಿಲುಕದ, ವೈಜ್ಞಾನಿಕ ತಳಹದಿಯಲ್ಲಿ ಉತ್ತರ ಕಂಡುಕೊಳ್ಳದ ವಿಸ್ಮಯಕಾರಿ ಘಟನೆಗಳನ್ನು ಕಾರ್ಯಕ್ರಮದ ನಿರ್ಮಾಪಕ ವೈ.ಎ.ನಾರಾಯಣಸ್ವಾಮಿ ಪ್ರತಿ ವಾರ ನಿಮ್ಮ ಮುಂದೆ ತರುತ್ತಾರೆ.
ಈಗ 'ಹೀಗೂ ಉಂಟೇ.!' ಕಾರ್ಯಕ್ರಮದ ಬಗ್ಗೆ ನಾವು ಇಷ್ಟೆಲ್ಲಾ ಪೀಠಿಕೆ ಹಾಕುತ್ತಿರುವುದಕ್ಕೂ ಒಂದು ಕಾರಣ ಇದೆ. ಅದೇನಪ್ಪಾ ಅಂದ್ರೆ, 'ಕರ್ವ' ಚಿತ್ರದ ಕಥೆಗೂ 'ಹೀಗೂ ಉಂಟೇ.!' ಕಾರ್ಯಕ್ರಮಕ್ಕೂ ಲಿಂಕ್ ಇದೇ. ಆ ಲಿಂಕ್ ಏನು ಅನ್ನೋದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದ್ರೆ, 'ಕರ್ವ' ಚಿತ್ರದಲ್ಲಿ 'ಹೀಗೂ ಉಂಟೇ.!' ಕಾರ್ಯಕ್ರಮ ನಡೆಯಲಿದೆ. [ಮೀಟರ್ ಇರುವವರಿಗೆ ಮತ್ತೊಂದು ಕೊಡುಗೆ 'ಕರ್ವ'.!]
'ಕರ್ವ' ಚಿತ್ರದಲ್ಲಿ 'ಹೀಗೂ ಉಂಟೇ.!' ಕಾರ್ಯಕ್ರಮದ ನಿರ್ಮಾಪಕ ವೈ.ಎ.ನಾರಾಯಣಸ್ವಾಮಿ ಕೂಡ ಅಭಿನಯಿಸಿದ್ದಾರೆ. ಅದರ ಎಕ್ಸ್ ಕ್ಯೂಸಿವ್ ಫೋಟೋ ನಿಮ್ಮ 'ಫಿಲ್ಮಿಬೀಟ್ ಕನ್ನಡ'ಗೆ ಲಭ್ಯವಾಗಿದೆ.
'6-5=2' ಚಿತ್ರದ ನಂತರ ನಿರ್ಮಾಪಕ ಕೃಷ್ಣಚೈತನ್ಯ ನಿರ್ಮಿಸುತ್ತಿರುವ ಚಿತ್ರ 'ಕರ್ವ'. ದೇವರಾಜ್, ತಿಲಕ್, ರೋಹಿತ್ ಮುಖ್ಯ ಭೂಮಿಕೆಯಲ್ಲಿರುವ 'ಕರ್ವ' ಚಿತ್ರಕ್ಕೆ ನವ ಪ್ರತಿಭೆ ನವನೀತ್ ಆಕ್ಷನ್ ಕಟ್ ಹೇಳಿದ್ದಾರೆ. ['ಕರ್ವ' ಚಿತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಗೆ ಏನು ಕೆಲಸ?]