Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ ಉಪೇಂದ್ರ 'ಬ್ರಹ್ಮ' ಸೂಪರೋ ರಂಗ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸಿರುವ ಬ್ರಹ್ಮ ಚಿತ್ರ ಪ್ರಾದೇಶಿಕ ಸೆನ್ಸಾರ್ ಮಂಡಳಿಯಲ್ಲಿ ಯು/ಎ ಸರ್ಟಿಫಿಕೇಟ್ ನೊಂದಿಗೆ ಪಾಸಾಗಿದೆ. ಆರ್ ಚಂದ್ರು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಭಾರಿ ಬಜೆಟ್ ಚಿತ್ರ ಫೆಬ್ರವರಿ 7ರಂದು ತೆರೆಗೆ ಅಪ್ಪಳಿಸುತ್ತಿದೆ.
ಈ ಹಿಂದೆ ಪ್ರೇಮಿಗಳ ದಿನದಂದು ಅಂದರೆ ಫೆಬ್ರವರಿ 14ರಂದು ತೆರೆ ಕಾಣುತ್ತದೆ ಎಂಬ ಸುದ್ದಿ ಇತ್ತು. ಈಗ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪಕ್ಕಾ ಮಾಡಿದ್ದು ಫೆಬ್ರವರಿ 7ಕ್ಕೆ ಚಿತ್ರ ಉಪ್ಪಿ ಅಭಿಮಾನಿಗಳ ಮುಂದೆ ಬರುತ್ತಿದೆ. [ರಿಯಲ್ ಸ್ಟಾರ್ ಉಪ್ಪಿ ಕಿರಿಕ್ ಮಾಡಿದ್ಯಾಕೆ ಗೊತ್ತಾ?]
ರಾಜ್ಯದಾದ್ಯಂತೆ 250 ಚಿತ್ರಮಂದಿರಗಳಲ್ಲಿ ಬ್ರಹ್ಮ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ. ಚಿತ್ರದ ಆಡಿಯೋಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು ಪ್ಲಾಟಿನಂ ಡಿಸ್ಕ್ ಮಾಡಲಾಗಿದೆ.
ಗುರುಕಿರಣ್ ಸಂಗೀತ ಇರುವ ಚಿತ್ರಕ್ಕೆ ನಾಯಕಿ ಪ್ರಣೀತಾ. ಮಲೇಷ್ಯ್ಯಾದಲ್ಲಿ ಚಿತ್ರವನ್ನು 40 ದಿನಗಳ ಕಾಲ ಚಿತ್ರೀಕರಿಸಲಾಗಿದೆ. ಹಾಡುಗಳು, ಆಕ್ಷನ್ ಸನ್ನಿವೇಶಗಳನ್ನು ಅಲ್ಲಿ ಸೆರೆಹಿಡಿಯಲಾಗಿದೆ. ಉಳಿದ ಯುದ್ಧದ ಸನ್ನಿವೇಶಗಳನ್ನು ಬೆಂಗಳೂರು, ನೆಲಮಂಗಲ ಬಳಿ ಚಿತ್ರೀಕರಿಸಿಕೊಳ್ಳಲಾಗಿದೆ.
ಬ್ರಹ್ಮ ಚಿತ್ರದ ಧ್ವನಿಸಾಂದ್ರಿಕೆಯನ್ನು ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಲಾಗಿದೆ. ಆಡಿಯೋಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸ್ಪೆಷಲ್ ಆಗಿ ಆರ್ಡರ್ ಕೊಟ್ಟೆ ಹಾಗೂ ಟಿಂಗು ಟಿಂಗು ಹಾಡುಗಳನ್ನು ಅಭಿಮಾನಿಗಳು ಮತ್ತೆ ಮತ್ತೆ ಕೇಳಿ ಆನಂದಿಸುತ್ತಿದ್ದಾರೆ.
ಮೈಲಾರಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಂಜುನಾಥ್ ಬಾಬು ನಿರ್ಮಿಸುತ್ತಿರುವ ಚೊಚ್ಚಲ ಚಿತ್ರವಿದು. ಈಗಾಗಲೆ ಚಿತ್ರದ ಬಗ್ಗೆ ಸಾಕಷ್ಟು ಕ್ರೇಜ್ ನಿರ್ಮಾಣವಾಗಿದೆ. ಚಿತ್ರದ ಸ್ಯಾಟಲೈಟ್ ರೈಟ್ಸ್ ಗೆ ಭಾರಿ ಬೇಡಿಕೆ ಬಂದಿದ್ದರೂ ನಿರ್ಮಾಪಕರು ಪ್ರಥಮ ಪ್ರತಿ ಬರುವವರೆಗೂ ಏನೂ ಹೇಳಲ್ಲ ಎಂದಿದ್ದಾರೆ. (ಏಜೆನ್ಸೀಸ್)