Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ 'ಟೋಪಿವಾಲ' ಬಿಡುಗಡೆ ಮುಂದಕ್ಕೆ
ಆದರೆ ಸೆನ್ಸಾರ್ ಮಂಡಳಿಯೊಂದಿಗೆ ಒಂದು ಸಣ್ಣ ಸಮಸ್ಯೆಯ ಕಾರಣ ಚಿತ್ರವನ್ನು ಮಾರ್ಚ್ 15ಕ್ಕೆ ಬಿಡುಗಡೆಯಾಗುತ್ತಿದೆ ಎನ್ನುತ್ತದೆ ಚಿತ್ರತಂಡ. ಚಿತ್ರದಲ್ಲಿ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಗಳು, ಮುಂಬರುವ ವಿಧಾನಸಭೆ ಚುನಾವಣೆಗಳ ಕಾರಣ ಸೆನ್ಸಾರ್ ಮಂಡಳಿ ಕೆಲವೊಂದು ಕಡೆ ಕತ್ತರಿ ಹಾಕಲು ಸೂಚಿಸಿದೆ.
ಹಾಗಾಗಿ ಚಿತ್ರ ಮಾರ್ಚ್ 8ಕ್ಕೆ ತೆರೆಕಾಣುವುದು ಅನುಮಾನ ಎನ್ನಲಾಗಿದೆ. ಮೂಲಗಳ ಪ್ರಕಾರ ಚಿತ್ರದಲ್ಲಿನ ಕೆಲವು ರಾಜಕೀಯ ಸನ್ನಿವೇಶಗಳು ಸೂಕ್ಷ್ಮವಾಗಿದ್ದು ಸೆನ್ಸಾರ್ ಮಂಡಳಿ ಸದಸ್ಯರನ್ನು ಆಲೋಚನೆಗೆ ಹಚ್ಚಿದೆಯಂತೆ. ಈ ಸನ್ನಿವೇಶಗಳನ್ನು ತೆಗೆಯಬೇಕೆ ಬೇಡವೆ ಎಂಬ ಬಗ್ಗೆ ಅವರವರಲ್ಲೇ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ಸೆನ್ಸಾರ್ ಚಿತ್ರತಂಡಕ್ಕೆ ಸೂಚಿಸಿದೆ. ಚಿತ್ರದ ಕಥೆಯ ಓಟಕ್ಕೆ ಯಾವುದೇ ತೊಂದರೆಯಾಗದಂತೆ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ತೆರೆಗೆ ಬರುವುದು ಒಂದು ವಾರ ತಡವಾಗಲಿದೆ.
'ಟೋಪಿವಾಲ' ಕಥೆ, ಚಿತ್ರಕಥೆ ಉಪೇಂದ್ರ ಅವರೇ ಹೆಣೆದಿದ್ದರೂ ಆಕ್ಷನ್ ಕಟ್ ಹೇಳಿರುವುದು ಶ್ರೀನಿವಾಸ್ (ಶ್ರೀನಿ). ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ಪಿ.ಶ್ರೀಕಾಂತ್ ಹಾಗೂ ಕನಕಪುರ ಶ್ರೀನಿವಾಸ್ ನಿರ್ಮಿಸಿರುವ ಚಿತ್ರ ಇದಾಗಿದೆ. ಭಾವನಾ ನಾಯಕಿಯಾಗಿರುವ ಚಿತ್ರದ ಅಡಿಬರಹವು ಕ್ಯಾಚಿಯಾಗಿದ್ದು, 'ತಲೆ ಇಲ್ಲದವರಿಗಲ್ಲ' ಎಂದಿಡಲಾಗಿದೆ. (ಏಜೆನ್ಸೀಸ್)