Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟಿ ಲೀಲಾವತಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ
ಹಿರಿಯ ನಟಿ ಲೀಲಾವತಿಗೆ ಅಭಿನವ ಭಾರ್ಗವ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನ ನೀಡಲು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಷ್ಣುಸೇನಾ ಸಮಿತಿ ನಿರ್ಧರಿಸಿದೆ.
ಕನ್ನಡದ ಹಿರಿಯ ನಟಿ ಲೀಲಾವತಿ ಅವರಿಗೆ ಡಾ.ವಿಷ್ಣುವರ್ಧನ್ ಅವರ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಷ್ಣು ಸೇನಾ ಸಮಿತಿಯ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಅಭಿನವ ಬಾರ್ಗವ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನ ಈ ಬಾರಿ ಲೀಲಾವತಿ ಅವರಿಗೆ ನೀಡಲು ನಿರ್ಧರಿಸಿದೆ. ನಿನ್ನೆ (ಅಕ್ಟೋಬರ್.13) ನಡೆದ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನ ಕೈಗೊಳ್ಳಲಾಗಿದೆ.
ಕಳೆದ ಮೂರು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಡಾ. ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನ ನೀಡುತ್ತಿದ್ದು, ಮೊದಲ ವರ್ಷ ಎಸ್.ಪಿ ಬಾಲಸುಬ್ರಮಣ್ಯಂರವರಿಗೆ ಹಾಗೂ ಎರಡನೇ ವರ್ಷ ರೆಬಲ್ ಸ್ಟಾರ್ ಡಾ.ಅಂಬರೀಶ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈಗ ಮೂರನೆ ವರ್ಷದ ಪ್ರಶಸ್ತಿಗೆ ಲೀಲಾವತಿಯವರನ್ನ ಆಯ್ಕೆ ಮಾಡಲಾಗಿದೆ. ಲೀಲಾವತಿಯವರಿಗೆ ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ನಿರ್ದೇಶಕ ದೊರೈ ಭಗವನ್ ಅತ್ಯುತ್ತಮ ಆಯ್ಕೆ ಅಂತ ಸಂತಸ ವ್ಯಕ್ತಪಡಿಸಿದ್ದಾರೆ. [ಯಾರೂ ಇಲ್ಲದ ಲೀಲಾವತಿಗೆ 'ಇವರೆಲ್ಲರ' ಪ್ರೋತ್ಸಾಹ ಇದೆ!]
ಲೀಲಾವತಿಯವರು ಸುಮಾರು 50 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ 600ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸುಮಾರು 400 ಕ್ಕೂ ಅಧಿಕ ಕನ್ನಡ ಸಿನಿಮಾಗಳನ್ನ ಮಾಡಿದ್ದಾರೆ. ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಹಲವು ನಟರ ಜೊತೆ ಲೀಲಾವತಿರವರು ಅಭಿನಯಿಸಿದ್ದಾರೆ.
ಮನು ಬಳಿಗಾರ್, ವಿ.ನಾಗೇಂದ್ರ ಪ್ರಸಾದ್, ಹಿರಿಯ ನಟಿ ಹೇಮಾಚೌದರಿ, ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ನಿನ್ನೆಯ ಸಭೆಯಲ್ಲಿ ಭಾಗವಹಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭವನ್ನ ಅಕ್ಟೋಬರ್ 30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದೆ.