Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಪ್ಪಿಗೆ ಶಿಕ್ಷೆ ಕೊಡೋಕೆ ಬರ್ತಾವ್ನೆ 'ಅರ್ಜುನ'
ಗಾಂಧಿನಗರದಲ್ಲಿ 'ಡೈನಾಮಿಕ್ ಪ್ರಿನ್ಸ್' ಎಂದೇ ಕರೆಯಲ್ಪಡುವ ಪ್ರಜ್ವಲ್ ದೇವರಾಜ್ ಅಭಿನಯದ 'ಮೃಗಶಿರ' ಚಿತ್ರ ಮಕಾಡೆ ಮಲಗಿದ ವಿಚಾರ ನಿಮಗೆ ಗೊತ್ತೆ ಇದೆ. ಆದ್ರೆ, ಹಳೇ ಸೋಲನ್ನ ಮರೆತು ಈಗ 'ಅರ್ಜುನ'ನಾಗಿ ಪುಟಿದೆದ್ದಿದ್ದಾರೆ ಪ್ರಜ್ವಲ್ ದೇವರಾಜ್.
ಅಪ್ಪ ದೇವರಾಜ್ - ಮಗ ಪ್ರಜ್ವಲ್ ಒಂದಾಗಿ ಕಾಣಿಸಿಕೊಂಡಿರುವ 'ಅರ್ಜುನ' ಚಿತ್ರದ ಟ್ರೈಲರ್ ಈಗ ಬಿಡುಗಡೆಗೊಂಡಿದೆ. ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಳ್ಳುತ್ತಿದೆ. 'ಅರ್ಜುನ' ಟ್ರೈಲರ್ ಇಲ್ಲಿದೆ ನೋಡಿ...
'ಪ್ರತಿ ತಪ್ಪಿಗೂ ಶಿಕ್ಷೆ ಕೊಡಬೇಕು ಎನ್ನುವವನೇ ಅರ್ಜುನ', 'ನ್ಯಾಯ ಇದ್ರೆ ಮನುಷ್ಯನಾಗಿರಬೇಕು, ಅನ್ಯಾಯ ಆದ್ರೆ ರಾಕ್ಷಸನಾಗಬೇಕು'...ಇಂತಹ ಖಡಕ್ ಡೈಲಾಗ್ಸ್ ಇರುವ 'ಅರ್ಜುನ' ಟ್ರೈಲರ್ ಎಲ್ಲೆಡೆ ಸಖತ್ ಸೌಂಡ್ ಮಾಡ್ತಿದೆ.
ಇಲ್ಲಿವರೆಗೂ ಚಾಕಲೇಟ್ ಬಾಯ್ ನಂತೆ ಕಾಣಿಸಿಕೊಳ್ಳುತ್ತಿದ್ದ ಪ್ರಜ್ವಲ್, 'ಅರ್ಜುನ' ಮೂಲಕ ಮೊದಲ ಬಾರಿ ಡಿಫರೆಂಟ್ ಲುಕ್ ನಲ್ಲಿ ಮಿಂಚಿದ್ದಾರೆ. ಆರ್ಯ ಕ್ರಿಯೇಷನ್ಸ್, ಅಡಿಯಲ್ಲಿ ಮೂಡಿಬರುತ್ತಿರುವ 'ಅರ್ಜುನ' ಪಕ್ಕಾ ಆಕ್ಷನ್-ಥ್ರಿಲ್ಲರ್ ಕಥೆಗೆ ಪಿ.ಸಿ.ಶೇಖರ್ ಆಕ್ಷನ್ ಕಟ್ ಹೇಳಿದ್ದಾರೆ.
ಇನ್ನೂ 'ಅರ್ಜುನ'ನಿಗೆ ನಾಯಕಿಯಾಗಿ ಮಲ್ಲು ಕುಟ್ಟಿ ಭಾಮಾ ಇದ್ರೆ ವಿಶೇಷ ಪಾತ್ರದಲ್ಲಿ ಶೀತಲ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ದೇವರಾಜ್, ರಮೇಶ್ ಭಟ್ ಮುಂತಾದವರ ತಾರಾಬಳಗ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿರುವ 'ಅರ್ಜುನ' ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ.