Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ವಿಷ್ಣುವರ್ಧನ್ ಹೆಸರಿನಲ್ಲಿ 'ರಾಷ್ಟ್ರೀಯ ಉತ್ಸವ' ನಡೆಸುವ ಔಚಿತ್ಯವೇನು.?
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ರವರ ನೆನಪಿನಲ್ಲಿ ಆಗಸ್ಟ್ 27 ರಂದು ದೆಹಲಿಯಲ್ಲಿ 'ರಾಷ್ಟ್ರೀಯ ಉತ್ಸವ' ನಡೆಸಲು ಡಾ.ವಿಷ್ಣು ಸೇನಾ ಸಮಿತಿ ಮುಂದಾಗಿದೆ. ಈಗಾಗಲೇ ಕಾರ್ಯಕ್ರಮಕ್ಕಾಗಿ ಪೂರ್ವ ತಯಾರಿ ಕೂಡ ಮಾಡಿಕೊಳ್ಳಲಾಗುತ್ತಿದೆ.
ಅಷ್ಟಕ್ಕೂ, ಡಾ.ವಿಷ್ಣುವರ್ಧನ್ ಹೆಸರಿನಲ್ಲಿ ರಾಷ್ಟ್ರೀಯ ಉತ್ಸವ ನಡೆಸುವ ಔಚಿತ್ಯವೇನು ಎಂಬುದರ ಕುರಿತು ಸದ್ಯ ಚರ್ಚೆ ಎದ್ದಿದೆ. ಇದಕ್ಕೆ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ರವರ ಬಳಿ ಸ್ಪಷ್ಟ ಉತ್ತರ ಕೂಡ ಇದೆ.
ವಿಷ್ಣು ಸೇನಾ ಸಮಿತಿಯಿಂದ ದೆಹಲಿಯಲ್ಲಿ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ'
ಡಾ.ವಿಷ್ಣುವರ್ಧನ್ ರವರು ಬದುಕಿದಷ್ಟು ಕಾಲ, ಅವರನ್ನು ಪ್ರೊಟೆಕ್ಟ್ ಮಾಡುವುದಾಯಿತೇ ಹೊರತು, ಪ್ರೊಜೆಕ್ಟ್ ಮಾಡುವ ಕೆಲಸಗಳು ಆಗಿರಲಿಲ್ಲ. 'ಅಭಿನಯ ಭಾರ್ಗವ' ಡಾ.ವಿಷ್ಣುವರ್ಧನ್ ರವರ ನಿಜವಾದ ಬದುಕಿನ ಅನಾವರಣ ಆಗಿರಲಿಲ್ಲ. ಸ್ಮಾರಕದ ವಿಷ್ಯದಲ್ಲಂತೂ ಸಹಿಸಲಾರದಷ್ಟು ಅವಮಾನಗಳಾಗಿವೆ.
ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ರಾಷ್ಟ್ರೀಯ ಉತ್ಸವ ಅಗತ್ಯ ಎನ್ನುತ್ತಾರೆ ವೀರಕಪುತ್ರ ಶ್ರೀನಿವಾಸ್. ಡಾ.ವಿಷ್ಣುವರ್ಧನ್ ರವರ ಬದುಕು, ಸಾಧನೆಗಳನ್ನು ರಾಷ್ಟ್ರಮಟ್ಟದ ವೇದಿಕೆಯಲ್ಲಿ ಚರ್ಚೆಗೆ ಒಳಗಾಗಿಸಲಿದ್ದಾರೆ ವೀರಕಪುತ್ರ ಶ್ರೀನಿವಾಸ. ಈ ದಿಟ್ಟ ಹೆಜ್ಜೆಗೆ ಕೋಟ್ಯಾಂತರ ವಿಷ್ಣು ಅಭಿಮಾನಿಗಳು ಸಾಥ್ ನೀಡಿದ್ದಾರೆ.