Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್-ಭಟ್ಟರ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ !
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಯೋಗರಾಜ್ ಭಟ್ ಜುಗಲ್ ಬಂದಿಯಲ್ಲಿ ಮೂಡಲಿರುವ ಮೂರನೇ ಚಿತ್ರದ ತಯಾರಿ ಜೋರಾಗಿ ನಡೆಯುತ್ತಿದೆ. ಈಗಾಗಲೇ ಸ್ಕ್ರಿಪ್ಟ್ ಅಂತಿಮ ಮಾಡಿರುವ ಚಿತ್ರತಂಡ, ಚಿತ್ರದ ಟೈಟಲ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿತ್ತು. ಈಗ ಗಣೀ ಹಾಗೂ ಭಟ್ಟರು ಕಾಂಬಿನೇಶನ್ ನ ಹ್ಯಾಟ್ರಿಕ್ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ.[ಗಣೇಶ್ ಮತ್ತು ಯೋಗರಾಜ್ ಭಟ್ ಅಡ್ಡದಿಂದ ಇದೀಗ ಬಂದ ಸುದ್ದಿ]
ಹೌದು, ಸ್ಟಾರ್ ಜೋಡಿಯ ಹೊಸ ಚಿತ್ರಕ್ಕೆ 'ಮುಗುಳು ನಗೆ' ಎಂಬ ಶೀರ್ಷಿಕೆಯನ್ನ ಅಂತಿಮ ಮಾಡಲಾಗಿದೆ. ಈ ಹಿಂದೆ ಈ ಚಿತ್ರಕ್ಕೆ 'ಜಾಮೂನು' ಎಂಬ ಟೈಟಲ್ ಇಡಲಾಗಿದೆ ಎಂಬ ಮಾತುಗಳು ಕೇಳಿಬಂದಿತ್ತಾದರೂ, ಈಗ ಸ್ವತಃ ಗಣೇಶ್ ಅವರೇ, 'ಮುಗುಳು ನಗೆ' ಎಂಬ ಟೈಟಲ್ ಇಟ್ಟಿರುವುದಾಗಿ ಟ್ವಿಟ್ಟರ್ ಮೂಲಕ ಸ್ವಷ್ಟಪಡಿಸಿದ್ದಾರೆ.[ಗೋಲ್ಡನ್ ಸ್ಟಾರ್ ಗಣೇಶ್, ಭಟ್ ಹ್ಯಾಟ್ರಿಕ್ ಕಾಂಬಿನೇಷನ್ ಚಿತ್ರ]
'ಮುಂಗಾರು ಮಳೆ', 'ಗಾಳಿಪಟ' ಚಿತ್ರದ ನಂತರ ಗಣೇಶ್ ಹಾಗೂ ಯೋಗರಾಜ್ ಭಟ್ ಒಂದಾಗಿದ್ದು, ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. 'ಮುಗುಳು ನಗೆ' ಚಿತ್ರದಲ್ಲಿ ಗಣೇಶ್ ಜತೆ ನಾಲ್ವರು ನಾಯಕಿಯರ ರೊಮ್ಯಾನ್ಸ್ ಮಾಡಲಿದ್ದು, ಸ್ಯಾಂಡಲ್ ವುಡ್ ನ ಟಾಪ್ ನಟಿಯರ ಜೊತೆ ಹೊಸ ಪ್ರತಿಭೆಗಳಿಗೂ ಅವಕಾಶ ದೊರೆಯಲಿದೆಯಂತೆ.[ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ನಾಯಕಿಯರು ಬೇಕಾಗಿದ್ದಾರೆ?]
ಅಂದ್ಹಾಗೆ, 'ಮುಗುಳುನಗೆ' ಚಿತ್ರವನ್ನ ಯೋಗರಾಜ್ ಮೂವೀಸ್ ಮತ್ತು ಗೋಲ್ಡನ್ ಮೂವೀಸ್ ಬ್ಯಾನರ್ನಡಿ, ಯೋಗರಾಜ್ ಭಟ್ ಹಾಗೂ ಗಣೇಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದು, ಜಯಂತ್ ಕಾಯ್ಕಿಣಿ ಹಾಗೂ ಭಟ್ ಅವರು ಸಾಹಿತ್ಯ ಬರೆಯಲಿದ್ದಾರೆ. ಸದ್ಯ, ಚಿತ್ರದ ಪ್ರೀ-ಪ್ರೊಡಕ್ಷನ್ ಮುಗಿಸಿರುವ ಚಿತ್ರತಂಡ, ಇದೇ ತಿಂಗಳಲ್ಲಿ ಸೆಟ್ಟೇರಲಿದೆ.