Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರದ 'ವೀಕೆಂಡ್' ಅತಿಥಿ ರಂಗಭೂಮಿ ಕಲಾವಿದೆ 'ಬಿ.ಜಯಶ್ರೀ'
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಈ ವಾರದ ಅತಿಥಿ ಯಾರು ಎಂಬ ಬಗ್ಗೆ ದೊಡ್ಡ ಕುತೂಹಲವಿತ್ತು. ಈ ಕುತೂಹಲಕ್ಕೀಗ ತೆರೆ ಬಿದ್ದಿದ್ದು, ಈ ವಾರದ ಸಾಧಕರು ಯಾರು ಎಂಬುದನ್ನು 'ಜೀ ಕನ್ನಡ' ವಾಹಿನಿ ಬಹಿರಂಗಗೊಳಿಸಿದೆ. ಅಂದ್ಹಾಗೆ, ಈ ವಾರ ಸಾಧಕರ ಸೀಟ್ ನಲ್ಲಿ ಹಿರಿಯ ರಂಗಭೂಮಿ ಕಲಾವಿದೆ ಬಿ.ಜಯ ಶ್ರೀ ಅವರು ಕುಳಿತುಕೊಳ್ಳಲಿದ್ದಾರೆ.
ಶನಿವಾರದ ಸಂಚಿಕೆಯಲ್ಲಿ ಬಿ.ಜಯ ಶ್ರೀ ಮತ್ತು ಭಾನುವಾರದ ಸಂಚಿಕೆಯಲ್ಲಿ ವಿಜಯ ಸಂಕೇಶ್ವರ್ ರವರು ಅತಿಥಿಯಾಗಿ ಭಾಗವಹಿಸಿದ್ದಾರೆ. ಇದೀಗ ಬಿ.ಜಯ ಶ್ರೀ ಅವರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಪ್ರೋಮೋ ರಿಲೀಸ್ ಆಗಿದೆ.[ಸಾಧಕರ ಸೀಟ್ ಮೇಲೆ ಕೂರಲು ವಿಜಯ್ ರಾಘವೇಂದ್ರ ಅರ್ಹರೇ.?]
ಬಿ.ಜಯಶ್ರೀ ಅವರು ರಂಗಭೂಮಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಕನ್ನಡ ಚಿತ್ರರಂಗದಲ್ಲಿ ನಟಿ ಹಾಗೂ ಗಾಯಕಿಯಾಗಿ ದೊಡ್ಡ ಹೆಸರು ಮಾಡಿದ್ದಾರೆ. ಇನ್ನು ಭಾರತ ಸರ್ಕಾರ ಅವರ ಸಾಧನೆಯನ್ನು ಗುರುತಿಸಿ 2013ರಲ್ಲಿ'ಪದ್ಮಶ್ರೀ' ಪ್ರಶಸ್ತಿ ಸಹ ನೀಡಿ ಗೌರವಿಸಿದೆ.[ಯಾರು ಎಷ್ಟೇ ಹೇಳಿದ್ರೂ, 'ವೀಕೆಂಡ್ ವಿತ್ ರಮೇಶ್' ಬಗ್ಗೆ ವೀಕ್ಷಕರ ಕೋಪ ಕಮ್ಮಿ ಆಗ್ತಿಲ್ಲ.!]
ಬಿ.ಜಯ ಶ್ರೀ ಅವರನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಕರೆಸಿರುವ ಬಗ್ಗೆ ಅನೇಕರು ಫೇಸ್ ಬುಕ್ ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಇಡೀ ರಂಗಭೂಮಿಗೆ ನೀಡಿದ ಗೌರವ ಎಂದು ಅಭಿಪ್ರಾಯ ಪಟ್ಟಿದ್ದಾರೆ.