Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೀಕೆಂಡ್ ವಿತ್ ರಮೇಶ್' ಬಳಿಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ತಮ್ಮ ಜೀವನದ ಹಾದಿಯನ್ನ ನಾಡಿನ ಜನತೆಯ ಮುಂದೆ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಸಿದ್ದರಾಮಯ್ಯ ಅವರ ಎಪಿಸೋಡ್ ಚಿತ್ರೀಕರಣವಾಗಿದ್ದು, ಈಗ ಪ್ರೋಮೋ ಕೂಡ ಬಿಡುಗಡೆಯಾಗಿದೆ.
ಬ್ರೇಕಿಂಗ್ ನ್ಯೂಸ್: ಸಾಧಕರ ಸೀಟ್ ಮೇಲೆ ಕುಳಿತ ಮುಖ್ಯಮಂತ್ರಿ ಸಿದ್ದರಾಮಯ್ಯ
ವೀಕೆಂಡ್ ಸಾಧಕರ ಕುರ್ಚಿಯಲ್ಲಿ ಕೂತು ಮಾತನಾಡಿದ ಸಿದ್ದರಾಮಯ್ಯ ಅವರು, ತಾವು ಸಾಗಿ ಬಂದ ರಾಜಕೀಯ ಹಾದಿ, ತಮ್ಮ ಬಾಲ್ಯ ಮತ್ತು ಶಾಲಾ ಕಾಲೇಜ್ ದಿನಗಳನ್ನು ನೆನೆಪಿಸಿಕೊಂಡರು. ಗೆಳಯರ ಜೊತೆ ಕುಣಿಯುತ್ತಿದ್ದ ಆ ದಿನಗಳನ್ನ ಮೆಲುಕು ಹಾಕಿದರು. ಪುತ್ರ ರಾಕೇಶ್ ಅವರ ಅಕಾಲಿಕ ನಿಧನವನ್ನ ನೆನೆದು ಭಾವುಕರಾದರು ಎಂದು ಜೀ-ಕನ್ನಡ ಮೂಲಗಳು ತಿಳಿಸಿವೆ.
ಇನ್ನು ಸಿದ್ದರಾಮಯ್ಯ ಅವರ ಎಪಿಸೋಡ್ ಚಿತ್ರೀಕರಣದ ನಂತರ ಟ್ವೀಟ್ ಮಾಡಿರುವ ಸಿಎಂ ''ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ನನ್ನ ನೆನಪನ್ನು ಹಸಿರಾಗಿಸಿತು. ಸಾಗಿ ಬಂದ ಹಾದಿಯನ್ನು ಮರಳಿ ನೋಡುವ ಅವಕಾಶವಾಯಿತು. ಧನ್ಯವಾದ ಜೀ ಕನ್ನಡ ಹಾಗೂ @Ramesh_aravind'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅಂತೆ-ಕಂತೆ ಅಂತೇನಿಲ್ಲ.. ಸಾಧಕರ ಸೀಟ್ ಮೇಲೆ ಸಿ.ಎಂ ಸಿದ್ದರಾಮಯ್ಯ ಕೂರೋದು ಪಕ್ಕಾ.!
ಅಂದ್ಹಾಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಇದೇ ಶನಿವಾರ (ಜೂನ್ 24) ಮತ್ತು ಭಾನುವಾರ (ಜೂನ್ 25) ಎರಡು ದಿನಗಳ ಕಾಲ ಜೀ ಕನ್ನಡ ವಾಹಿನಿಯಲ್ಲಿ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಪ್ರೋಮೋ ಇಲ್ಲಿದೆ ನೋಡಿ....