Don't Miss!
- News ಕೊಳ್ಳೇಗಾಲ ಶಾಸಕರ ಕಾರು ಅಪಘಾತ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈಟಿವಿ ಕನ್ನಡದಲ್ಲಿ ಅಣ್ಣಾವ್ರ 'ಸಂಪತ್ತಿಗೆ ಸವಾಲ್' ಚಿತ್ರ
ವರನಟ ಡಾ.ರಾಜ್ ಕುಮಾರ್ ಅವರಿಗೆ ಅಪಾರ ಹೆಸರು, ಕೀರ್ತಿ, ಹೊಸ ಇಮೇಜ್ ತಂದುಕೊಟ್ಟಂತಹ ಚಿತ್ರ 'ಸಂಪತ್ತಿಗೆ ಸವಾಲ್' (1974). ಉತ್ತರ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಈ ನಾಟಕವನ್ನು ಬರೆದವರು ಹೆಸರಾಂತ ನಾಟಕಕಾರರಾದ ಪಿ.ಬಿ.ಧುತ್ತರಗಿ.
ಶ್ರೀಮಂತರ ಸೊಕ್ಕು ಅಡಗಿಸುವ ಅವರ ಅಹಂಕಾರ, ದೌರ್ಜನ್ಯದ ವಿರುದ್ಧ ಸಿಡಿದೇಳುವ ನಾಯಕ ಹೇಗೆ ಸಂಪತ್ತಿಗೆ ಸವಾಲ್ ಒಡ್ಡುತ್ತಾನೆ ಎಂಬುದೇ ಚಿತ್ರದ ಕಥಾವಸ್ತು. ಸಂಪತ್ತಿಗೆ ಸವಾಲ್ ನಾಟಕವನ್ನು ನೋಡಿದ ರಾಜಕುಮಾರ್ ಮತ್ತು ಕುಟುಂಬ ಇದೇ ಹೆಸರಿನಲ್ಲಿ ಚಿತ್ರ ಮಾಡಲು ನಿರ್ಧರಿಸಿದರು.
ಪದ್ಮಶ್ರೀ ಬ್ಯಾನಲ್ ಲಾಂಛನದಲ್ಲಿ ನಿರ್ಮಾಣವಾದ ಈ ಚಿತ್ರದಲ್ಲಿ ರಾಜ್ ಕುಮಾರ್ ಗೆ ಮಂಜುಳಾ ಜೋಡಿ. ಪೋಷಕ ಪಾತ್ರಗಳಲ್ಲಿ ಎಂ.ವಿ.ರಾಜಮ್ಮ, ವಜ್ರಮುನಿ, ರಾಜಾಶಂಕರ್, ಬಾಲಕೃಷ್ಣ, ಜೋಕರ್ ಶ್ಯಾಮ್, ಬಿ.ಜಯ ಮುಂತಾದವರಿದ್ದಾರೆ.
ಜಿ.ಕೆ.ವೆಂಕಟೇಶ್ ಅವರ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ, ಚಿಟ್ಟಿಬಾಬು ಛಾಯಾಗ್ರಹಣವಿರುವ ಚಿತ್ರವನ್ನು ಎ.ವಿ.ಶೇಷಗಿರಿರಾವ್ ನಿರ್ದೇಶಿಸಿದ್ದಾರೆ. ಚಿತ್ರದ ನಿರ್ಮಾಪಕರು ಎ.ಎನ್.ಮೂರ್ತಿ. ಈಟಿವಿ ಕನ್ನಡದಲ್ಲಿ ಇದೇ ಭಾನುವಾರ (ನವೆಂಬರ್ 24) ಸಂಜೆ 5ಕ್ಕೆ ವೀಕ್ಷಿಸಬಹುದು. (ಒನ್ಇಂಡಿಯಾ ಕನ್ನಡ)