Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇವೇಗೌಡರ ಗೂಡು ಸೇರಿದ ಟಿವಿ ನಟ ರವಿಕಿರಣ್
ಆದರೆ ಅವರು ಜೆಡಿಎಸ್ ಪಕ್ಷಕ್ಕೆ ಇನ್ನೂ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಅವರು ದೇವೇಗೌಡರನ್ನು ಔಪಚಾರಿಕವಾಗಿ ಮಾತನಾಡಿಸಿಕೊಂಡು ಅವರ ಆಶೀರ್ವಾದ ಪಡೆದಿದ್ದಾರೆ ಅಷ್ಟೇ. ಇನ್ನೇನು ಆರು ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಅವರ ಇಂದಿನ ಭೇಟಿ ರಾಜಕೀಯ ಸೇರ್ಪಡೆಗೆ ಸೂಚನೆಯೇ?
ಮುಂಬರುವ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೋ ಅಥವಾ ಜೆಡಿಎಸ್ ಪಕ್ಷದ ಕಾರ್ಯಕರ್ತರಾಗಿ ತಮ್ಮ ಕೈಲಾದ ಸಹಾಯ ಮಾಡುತ್ತಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರ ದಿಢೀರ್ ಭೇಟಿ ಕಿರುತೆರೆ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಅವರು ಕಿರುತೆರೆ ಕ್ಷೇತ್ರಕ್ಕೆ ತಮ್ಮದೇ ಆದಂತಹ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ. ಐದು ಸಾವಿರಕ್ಕೂ ಅಧಿಕ ಸದಸ್ಯರನ್ನೊಳಗೊಂಡ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೂಲಕ ಜೆಡಿಎಸ್ ಗೆ ಅವರ ಅಳಿಲು ಸೇವೆ ಸಿಗುತ್ತಾ? ಕಾದುನೋಡೋಣ.
ರವಿಕಿರಣ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಹಳೆಯ ಗೆಳೆಯ. ತೆಲುಗಿನ ಖ್ಯಾತ ನಟ ಎಸ್ ವಿ ರಂಗಾರಾವ್ ಅವರ ಮೊಮ್ಮಗ. ಕಿರುತೆರೆಯ ರವಿಚಂದ್ರನ್ ಎಂದೇ ಖ್ಯಾತರಾದವರು. ಕಿರುತೆರೆಯ ಕನಸುಗಾರ ಎಂದರೂ ತಪ್ಪಿಲ್ಲ. (ಒನ್ಇಂಡಿಯಾ ಕನ್ನಡ)