Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಪ್ರಥಮ ಬಾರಿಗೆ ಸುವರ್ಣದಲ್ಲಿ ಸಂಗೊಳ್ಳಿ ರಾಯಣ್ಣ
ಸ್ಟಾರ್ ನೆಟ್ ವರ್ಕ್ ನ ಸುವರ್ಣ ವಾಹಿನಿಯು ತನ್ನ ವೀಕ್ಷಕರಿಗೆ ಸದಾ ವಿನೂತನ ಕಾರ್ಯಕ್ರಮಗಳನ್ನೇ ಉಣಬಡಿಸುತ್ತಾ ಬರುತ್ತಿದ್ದು ಈಗ ಪ್ರಪ್ರಥಮ ಬಾರಿಗೆ ಕಳೆದ ವರ್ಷದ ಅತ್ಯುತ್ತಮ ಕನ್ನಡ ಚಲನಚಿತ್ರ ಎಂದೇ ಖ್ಯಾತಿ ಆದ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಲನಚಿತ್ರವನ್ನು ಇದೇ ಸೆಪ್ಟೆಂಬರ್ 8 ರ ಭಾನುವಾರದಂದು ಸಂಜೆ 5.30ಕ್ಕೆ ಪ್ರಸಾರ ಮಾಡುತ್ತಿದೆ.
2012ರಲ್ಲಿ ತೆರೆಕಂಡ ಐತಿಹಾಸಿಕ ಬ್ಲಾಕ್ ಬಸ್ಟರ್ ಚಿತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಇದನ್ನು ನಾಗಣ್ಣ ಅವರು ನಿರ್ದೇಶನ ಮಾಡಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಜಯಪ್ರದಾ ಮತ್ತು ನಿಖಿತಾ ತುಕ್ರಾಲ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. [ಚಿತ್ರ ವಿಮರ್ಶೆ ಓದಿ]
ಒಟ್ಟಿನಲ್ಲಿ ಕುಟುಂಬ ಸಮೇತರಾಗಿ ಒಟ್ಟಾಗಿ ಕುಳಿತು ನೋಡುವಂತಹ ಜೊತೆಗೆ ಕ್ರಾಂತಿವೀರನ ಹೋರಾಟ, ದೇಶಪ್ರೇಮ, ಗೌರವ , ಅಭಿಮಾನ ಮುಂತಾದವುಗಳನ್ನು ಮೆರೆಯುವಂತಹ ಚಲನಚಿತ್ರ ಇದಾಗಿದೆ.
ಕನ್ನಡ ಚಲನಚಿತ್ರರಂಗದಲ್ಲೇ ಅತ್ಯಂತ ಅದ್ಧೂರಿ ಚಿತ್ರವನ್ನು ನಿರ್ದೆಶಿಸಿದ ನಾಗಣ್ಣ ಮತ್ತು ನಿರ್ಮಿಸಿದ ಆನಂದ ಬಿ ಅಪ್ಪುಗೋಳ ಅವರದು ಚಾಲೆಂಜಿಂಗ್ ಪ್ರಯತ್ನ ವಾಗಿದೆ. ಇಂತಹ ಅದ್ಭುತ ಸಿನೆಮಾ ಹಕ್ಕುಗಳನ್ನು ಸುವರ್ಣವಾಹಿನಿಯು ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಐತಿಹಾಸಿಕ ಚಿತ್ರವನ್ನು ಮರೆಯದೇ ನೋಡಿ ಇದೇ ಭಾನುವಾರ ಸಂಜೆ 5-30ಕ್ಕೆ ನಿಮ್ಮ ನೆಚ್ಚಿನ ಸುವರ್ಣ ವಾಹಿನಿಯಲ್ಲಿ. (ಒನ್ಇಂಡಿಯಾ ಕನ್ನಡ)