Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾ ಶಿವರಾತ್ರಿ ಹಬ್ಬ, ಸ್ಟಾರ್ ಸುವರ್ಣ ವಾಹಿನಿ ಹಾಗೂ 'ಮಹಾಯಾಗ'
ಸ್ಟಾರ್ ಸುವರ್ಣ ವಾಹಿನಿಯು ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಇದೇ ಫೆಬ್ರವರಿ 18 ರಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಕಮಲಮ್ಮನಗುಂಡಿ (ಇಸ್ಕಾನ್ ಎದುರು) ಮೈದಾನದಲ್ಲಿ 'ಮಹಾಯಾಗ' ಹಮ್ಮಿಕೊಂಡಿದೆ.
ಬೆಳಗ್ಗೆ 9ಕ್ಕೆ ಭಕ್ತರಿಂದ 11 ಲಕ್ಷ ಶಿವನಾಮ ಜಪ, 1008 ಮೃತ್ತಿಕಾ ಶಿವಲಿಂಗ ಸ್ಥಾಪನೆ ಹಾಗೂ ಡಾ.ವಿದ್ವಾನ್ ಗೋಪಾಲಕೃಷ್ಣ ಗುರೂಜಿಯವರಿಂದ 'ಮಹಾ ರುದ್ರಯಾಗ' ನಡೆಯಲಿದೆ.[ಫೆಬ್ರವರಿ 13 ರಿಂದ ಕರುನಾಡ ಮನೆ ಮನೆಯಲ್ಲೂ ಗಣೇಶೋತ್ಸವ.!]
ಮಧ್ಯಾಹ್ನ 2ಕ್ಕೆ ಬೆಂಗಳೂರಿನ ವಿವಿಧ ಭಜನಾ ಮಂಡಳಿಗಳಿಂದ ಶಿವ, ಪಾರ್ವತಿ ಹಾಗೂ ಗಣೇಶನ ಕುರಿತು ಭಜನೆ ನಡೆಯಲಿದೆ. ಸಂಜೆ 4ಕ್ಕೆ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕರಿಂದ ಸಂಕಲ್ಪ ಮತ್ತು ಮಹಾ ಪೂಜೆ ನೆರವೇರಲಿದೆ. ಹಾಗೇ ಸಂಜೆ 6ಕ್ಕೆ ಸುವರ್ಣ ಲೇಡೀಸ್ ಕ್ಲಬ್ ಸದಸ್ಯರು ನಟರಾಜನಿಗೆ ನಾಟ್ಯ ನಮನ ಸಲ್ಲಿಸಲಿದ್ದಾರೆ.[ಮಹಾದೇವ 'ವಿಷಕಂಠ'ನಾದ ರೋಚಕ ಕಥೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ.!]
ಈ ಕಾರ್ಯಕ್ರಮದಲ್ಲಿ ಸ್ಟಾರ್ ಸುವರ್ಣ ವಾಹಿನಿಯ 'ಹರಹರ ಮಹಾದೇವ' ಧಾರಾವಾಹಿಯ ನಟ-ನಟಿಯರು ಭಾಗವಹಿಸಲಿದ್ದಾರೆ. ಜೊತೆಗೆ ಸ್ಟಾರ್ ಸುವರ್ಣ ಪರಿವಾರದ ಸದಸ್ಯರು, ನರೇಂದ್ರ ಬಾಬು ಶರ್ಮಾ ಗುರೂಜಿ ಹಾಗೂ ಸಂತೋಷ್ ಗುರೂಜಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಲು ಉಚಿತ ಪ್ರವೇಶ ಇದೆ.