Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ 'ಯುವ' ಸಾಧಕರು.!
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನ ಸಾಧಕರ ಸೀಟ್ ಮೇಲೆ ಕೂರಿಸಿ, ಅವರ ಮುಂದೆಯೇ ಅವರ ಹೆಜ್ಜೆಗುರುತುಗಳನ್ನು ಅನಾವರಣ ಮಾಡುವ ವಿಶಿಷ್ಟ ಶೋ 'ವೀಕೆಂಡ್ ವಿತ್ ರಮೇಶ್'
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಅಗುತ್ತಿರುವ 'ವೀಕೆಂಡ್ ವಿತ್ ರಮೇಶ್' ಮೂರನೇ ಆವೃತ್ತಿಯಲ್ಲಿ ಈಗಾಗಲೇ ಕನ್ನಡ ಚಿತ್ರರಂಗದಿಂದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ನವರಸ ನಾಯಕ ಜಗ್ಗೇಶ್, ಪ್ರಕಾಶ್ ರೈ, ಅರ್ಜುನ್ ಜನ್ಯ, ವಿ.ಹರಿಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು. ಈಗ ಅದೇ ಲಿಸ್ಟ್ ಗೆ ಚಿತ್ರರಂಗದ 'ಯುವ ಸಾಧಕರು' ಸೇರಿಕೊಳ್ಳಲಿದ್ದಾರೆ. ಮುಂದೆ ಓದಿ....
ಈ 'ವೀಕೆಂಡ್'ನಲ್ಲಿ 'ಸಿಂಪಲ್ ಸ್ಟಾರ್'
ಈ 'ವೀಕೆಂಡ್'ನಲ್ಲಿ ಸಾಧಕರ ಸೀಟ್ ಮೇಲೆ ಕೂರುವವರು 'ಸಿಂಪಲ್ ಸ್ಟಾರ್' ರಕ್ಷಿತ್ ಶೆಟ್ಟಿ. ಇದೇ ಶನಿವಾರ ರಾತ್ರಿ 9 ಗಂಟೆಗೆ ರಕ್ಷಿತ್ ಶೆಟ್ಟಿ ಭಾಗವಹಿಸಿರುವ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಅಗಲಿದೆ. [ಸಾಧಕರ ಸೀಟ್ ಮೇಲೆ ಕುಳಿತ 'ಸಿಂಪಲ್ ಸ್ಟಾರ್' ರಕ್ಷಿತ್ ಶೆಟ್ಟಿ.!]
'ಕಿರಿಕ್' ತಂಡ
ರಕ್ಷಿತ್ ಶೆಟ್ಟಿ ರವರ ಜೀವನ ಚರಿತ್ರೆ ಅನಾವರಣ ಆಗಲಿರುವ ಈ ಸಂಚಿಕೆಯಲ್ಲಿ 'ಕಿರಿಕ್ ಪಾರ್ಟಿ' ಚಿತ್ರತಂಡದಿಂದ ರಿಶಬ್ ಶೆಟ್ಟಿ, ಸಂಯುಕ್ತ ಹೆಗಡೆ, ಅಜನೀಶ್ ಲೋಕನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.
ಭಾನುವಾರ 'ಪ್ರಿಯಾಮಣಿ' ಸ್ಪೆಷಲ್
ಇನ್ನೂ ಭಾನುವಾರ ರಾತ್ರಿ 9 ಗಂಟೆಗೆ ಸಾಧಕರ ಸೀಟ್ ಮೇಲೆ ಕೂರುವವರು ಬೆಂಗಳೂರಿನ ಬೆಡಗಿ ಪ್ರಿಯಾಮಣಿ. ['ವೀಕೆಂಡ್ ವಿತ್ ರಮೇಶ್' ಸಾಧಕರ ಸೀಟಲ್ಲಿ ಪಂಚಭಾಷಾ ತಾರೆ]
ಪ್ರಿಯಾಮಣಿ ಲೈಫ್ ಸ್ಟೋರಿ
ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಪ್ರಿಯಾಮಣಿ.... ಬಣ್ಣದ ಬದುಕಿಗೆ ಕಾಲಿಟ್ಟು ರಾಷ್ಟ್ರ ಪ್ರಶಸ್ತಿ ಪಡೆದ ಸಾಧನೆಯ ಕಥೆ ಈ ವಾರಾಂತ್ಯದಲ್ಲಿ ತೆರೆದುಕೊಳ್ಳಲಿದೆ.