Don't Miss!
- News ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಸತ್ ಮಂಡಳಿ ಜೊತೆ ಅಮೀರ್ ಖಾನ್ ಸಂವಾದ
ವೈದ್ಯಕೀಯ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳನ್ನು ಅದನ್ನು ಅನಭವಿಸಿದವರು ಹಾಗೂ ಅವರಲ್ಲಿರುವ ಸಾಕ್ಷಿ ಸಮೇತ ಅಮೀರ್ ಖಾನ್ ಬಹಿರಂಗಗೊಳಿಸಿದ್ದರು. ಇದರಿಂದ ಭಾರತೀಯ ವೈದ್ಯಕೀಯ ಸಂಘ (IMA) ಹಾಗೂ ಕೆಲವು ವೈದ್ಯರು ನಟ ಅಮೀರ್ ಖಾನ್ ವಿರುದ್ಧ ತಿರುಗಿಬಿದ್ದಿದ್ದರು. ಅಮೀರ್ ಬಹಿರಂಗ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರು. ಆದರೆ ಅಮೀರ್ ಅದಕ್ಕೆ ಕ್ಯಾರೇ ಅಂದಿರಲಿಲ್ಲ.
ಧಾರಾವಾಹಿಯ ಆ ವಿಶೇಷ ಸಂಚಿಕೆಗೆ ನಡೆಸಿದ ಸಂಶೋಧನೆಗೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಳ್ಳಲು ಬಿಜೆಪಿ ರಾಜ್ಯಸಭೆ ಸದಸ್ಯ ಹಾಗೂ ಸಂಸದೀಯ ವಾಣಿಜ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಕುಮಾರ್, ಅಮೀರ್ ಖಾನ್ ಅವರನ್ನು ಆಹ್ವಾನಿಸಿದ್ದಾರೆ. ಸಾಕ್ಷಿ ಸಮೇತ ಅಮೀರ್ ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ವೈದ್ಯಕೀಯ ಸಮಿತಿ (MMC), ಇದೇ ಸತ್ಯಮೇವ ಜಯತೆ ಕಾರ್ಯಕ್ರಮದಲ್ಲಿ ಪ್ರಸಾರವಾದ ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದ ಕಾರ್ಯಕ್ರಮ ವೀಕ್ಷಿಸಿದ ನಂತರ 13 ವೈದ್ಯರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಹೀಗಾಗಿ ಸಾಕಷ್ಟು ವೈದ್ಯರು ಅಮೀರ್ ವಿರುದ್ಧ ತಿರುಗಿಬಿದ್ದಿದ್ದಾರೆ.
ಇಂದು ನಡೆಯುವ ಸಂವಾದ ಕಾರ್ಯಕ್ರಮದ ನಂತರ ನಟ ಅಮೀರ್ ಖಾನ್ ಹಾಗೂ ಸತ್ಯಮೇವ ಜಯತೆ ಶೋ, ಮುಂದಿನ ದಿನಗಳಲ್ಲಿ ಯಾವ ರೀತಿಯ ಕಾರ್ಯಕ್ರಮ ನೀಡಬಹುದೆಂಬ ಕುತೂಹಲ ಎಲ್ಲರಲ್ಲಿದೆ. ಒಟ್ಟಿನಲ್ಲಿ, ಸತ್ಯಮೇವ ಜಯತೆ ಮೂಲಕ ವೈದ್ಯಲೋಕಕ್ಕೆ ಎಚ್ಚರಿಕೆಯ ಸಂದೇಶವೊಂದು ರವಾನೆಯಾಗಿದೆ. ಹಾಗೇ, ಸಾರ್ವಜನಿಕರ ಒಳಿತಿಗೆ ಹೋರಾಡುವಾಗ ಸಾಕಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ ಎಂಬ ಅನುಭವ ಅಮೀರ್ ಗೂ ಆಗಿದೆ. (ಏಜೆನ್ಸೀಸ್)