Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮನಸಾರೆ ಶಿವಣ್ಣನನ್ನು ಕಿಚ್ಚ ಸುದೀಪ್ ಹಾರೈಸಿದ್ದು ಹೀಗೆ
ಈಟಿವಿ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ರಿಯಾಲಿಟಿ ಶೋ ಕಾರ್ಯಕ್ರಮದ ಶನಿವಾರದ (ಮೇ 18) ಎಪಿಸೋಡಿನಲ್ಲಿ ಸುದೀಪ್, ಶಿವಣ್ಣನ ಮುಂದಿನ ಬಹು ನಿರೀಕ್ಷೀತ ಕಡ್ಡಿಪುಡಿ ಚಿತ್ರಕ್ಕೆ ಮತ್ತು ಶಿವರಾಜ್ ಕುಮಾರಿಗೆ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ.
ಕಡ್ಡಿಪುಡಿ ಚಿತ್ರದ ನಿರ್ದೇಶಕ ದುನಿಯಾ ಸೂರಿ ಮತ್ತು ಆ ಚಿತ್ರದ ಎರಡು ಹಾಡಿಗೆ ಸಾಹಿತ್ಯ ಬರೆದಿರುವ ಯೋಗರಾಜ್ ಭಟ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಅವರ ಮುಂದಿನ ಕಡ್ಡಿಪುಡಿ ಚಿತ್ರ ಯುಶಸ್ವಿಯಾಗಲಿ.
ಈ ಚಿತ್ರ ಅವರ ವೃತ್ತಿ ಜೀವನದ ಮತ್ತೊಂದು ಸೂಪರ್ ಹಿಟ್ ಚಿತ್ರವಾಗಲಿ, ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಸುದೀಪ್ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಡ್ಡಿಪುಡಿ ಚಿತ್ರದ ಬಗ್ಗೆ ನಿರ್ದೇಶಕ ಸೂರಿಯಿಂದ ಬಹಳಷ್ಟು ಮಾಹಿತಿ ಪಡೆದುಕೊಂಡ ಸುದೀಪ್, ಸ್ಯಾಂಡಲ್ ವುಡ್ಡಿನಲ್ಲಿ ಲಾಂಗ್ ಹೇಗೆ ಹಿಡಿಯಬೇಕೆಂದು ತಿಳಿಸಿಕೊಟ್ಟವರೇ ಶಿವಣ್ಣ. ಈ ಚಿತ್ರ ಬಹಳಷ್ಟು ನಿರೀಕ್ಷೆ ಹುಟ್ಟು ಹಾಕಿದೆ ಎಂದು ಸುದೀಪ್ ನಿರ್ದೇಶಕರ ಬೆನ್ನು ತಟ್ಟಿದರು.
ಸೂರಿ ಮತ್ತು ಯೋಗರಾಜ್ ಭಟ್ ನಡುವಿನ ಸ್ನೇಹದ ಬಗ್ಗೆ ಮಾತು ಉರುಳಿದಾಗ ಉತ್ತಮ ಸ್ನೇಹ ಸಂಬಂಧಕ್ಕೆ ಹುಳಿ ಹಿಂಡುವ ಕೆಲಸ ಕೆಲವರು ಮಾಡುತ್ತಲೇ ಇರುತ್ತಾರೆ ಎಂದು ಮಾರ್ಮಿಕವಾಗಿ ಸುದೀಪ್ ಬೇಸರ ವ್ಯಕ್ತ ಪಡಿಸಿದರು.
ಶಿವಣ್ಣನಿಗಾಗಿ ಕಥೆ ಹಣೆದು ಚಿತ್ರ ನಿರ್ದೇಶಿಸುತ್ತಿದ್ದೇನೆ. ಇದು ನನ್ನ ಶೈಲಿಯ ಸಿನಿಮಾ, ಕೆಲವೊಂದು ಹೊಸ ಪ್ರಯತ್ನ ಮಾಡಿದ್ದೇನೆ ಎಂದು ಸೂರಿ ಈ ಸಂದರ್ಭದಲ್ಲಿ ಹೇಳಿದರು.