Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ರಿಯಾಲಿಟಿ ಶೋಗೆ ಸ್ವಾಮಿ ನಿತ್ಯಾನಂದ?
ಸಿನಿಮಾ ತಾರೆಗಳು, ಹಾಟ್ ಬೆಡಗಿಯರು, ಸ್ವಾಮೀಜಿಗಳು, ವಿವಾದಾತ್ಮಕ ವ್ಯಕ್ತಿಗಳನ್ನು ಕರೆತರುವಲ್ಲಿ ಶೋನ ನಿರ್ವಾಹಕರು ಉಳಿದೆಲ್ಲಾ ರಿಯಾಲಿಟಿ ಶೋಗಳಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ ಎಂದೇ ಹೇಳಬೇಕು.
ಈಗ ಈ ಶೋನ 6ನೇ ಸೀಸನ್ ಗೆ ವಿವಾದಾತ್ಮಕ ದೇವಮಾನವ ಎಂದೇ ಕರೆಸಿಕೊಂಡಿರುವ ಸ್ವಾಮಿ ನಿತ್ಯಾನಂದ ಅವವರನ್ನು ಕರೆತರಲು ಶೋನ ಆಯೋಜಕರು ಮುಂದಾಗಿದ್ದಾರೆ. ಸ್ವಾಮಿ ನಿತ್ಯಾನಂದರ ಪರಿಚಯ ಎಲ್ಲರಿಗೂ ಇದ್ದೇ ಇದೆ ಎಂದು ಭಾವಿಸುತ್ತೇನೆ. ಇಲ್ಲಿ ಅವರ ಹಳೆಯ ವಿಡಿಯೋ ಕಥೆಯನ್ನು ಮತೊಮ್ಮೆ ನೆನಪಿಸುವ ಗೋಜಿಗೆ ನಾವು ಹೋಗುತ್ತಿಲ್ಲ.
ಹೌದೆ ಸ್ವಾಮಿಜಿಗಳು 'ಬಿಗ್ ಬಾಸ್ 6'ಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರಂತೆ ಎಂದು ಈ ಬಗ್ಗೆ ನಿತ್ಯಾನಂದ ಅವರ ವಕ್ತಾರ ದಲೆ ಭಗ್ವಾಗರ್ ಅವರನ್ನು ಕೇಳಲಾಗಿ ಅವರು, "ಈ ಹಿಂದೆ ಸಾಕಷ್ಟು ಸಲ ಸ್ವಾಮಿಜೀಗಳನ್ನು ಆಹ್ವಾನಿಸಲಾಗಿತ್ತು. ಆದರೆ ಅವರು ಭಾಗವಹಿಸುತ್ತಾರೋ ಇಲ್ಲವೋ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ" ಎಂದು ಮೌನಕ್ಕೆ ಶರಣಾಗಿದ್ದಾರೆ.
'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸುವವರ ಬಗ್ಗೆ ತುಂಬಾ ರಹಸ್ಯ ಕಾಪಾಡಿಕೊಂಡುಬರಲಾಗುತ್ತಿದೆ. ಸ್ವಾಮಿ ನಿತ್ಯಾನಂದ ಅವರ ವಿಷಯದಲ್ಲೂ ಹೀಗಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸತ್ಯಾಸತ್ಯತೆಗಳು ಇನ್ನಷ್ಟೇ ಗೊತ್ತಾಗಬೇಕು.
'ಬಿಗ್ ಬಾಸ್ 6' ರಿಯಾಲಿಟಿ ಶೋ ಅಕ್ಟೋಬರ್ 7, 2012ರಿಂದ ಜನವರಿ 2013ರವರೆಗೆ ನಡೆಯಲಿದೆ. ರಾತ್ರಿ 9 ಗಂಟೆ ಈ ಶೋ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಬಾರಿಯ ಶೋ ನಟ ಸಲ್ಮಾನ್ ಖಾನ್ ಸಮರ್ಪಿಸಲಿದ್ದಾರೆ. (ಏಜೆನ್ಸೀಸ್)