Don't Miss!
- Sports IPL 2024: ಗುಜರಾತ್ ತಂಡಕ್ಕೆ ಕಾಡಲಿದೆಯಾ ಹಾರ್ದಿಕ್ ಅನುಪಸ್ಥಿತಿ; ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್
- News ಬಿಜೆಪಿ ಮೈತ್ರಿ ಧರ್ಮ ಅನುಸರಿಸದಿದ್ರೆ ದಾವಣಗೆರೆಯಲ್ಲಿ ಗೆಲುವು ಕಷ್ಟ: ಜೆಡಿಎಸ್ ಮುಖಂಡರೇ ಹೀಗೆ ಹೇಳಿದ್ಯಾಕೆ?
- Lifestyle 2024 ಮಾರ್ಚ್ 20ಕ್ಕೆ ಅಮಲಕಿ ಏಕಾದಶಿ: ಈ ದಿನ ನೆಲ್ಲಿಕಾಯಿ ಗಿಡ ಪೂಜಿಸುವುದೇಕೆ? ಈ ಏಕಾದಶಿಯ ಮಹತ್ವವೇನು?
- Automobiles ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಥಟ್ ಅಂತ ಹೇಳಿ ರಸಪ್ರಶ್ನೆ ಶೋಗೆ ಮತ್ತೊಂದು ಗರಿ
ಈ ಸವಿನೆನಪಿಗಾಗಿ ಬೆಂಗಳೂರು ದೂರದರ್ಶನ ಕೇಂದ್ರ, ಆಕಾಶವಾಣಿ ಮೈಸೂರು, ಮೈಸೂರಿನ ಅವದೂತ ದತ್ತಪೀಠದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಕಾರ್ಯಕ್ರಮ ಜೂ.17, 2012ರಂದು ಮೈಸೂರಿನ ಸಚ್ಚಿದಾನಂದ ಗಣಪತಿ ಆಶ್ರಮ, ಮೈಸೂರಿನಲ್ಲಿ ನಡೆಯಲಿದೆ. ಸಮಯ ಬೆಳಗ್ಗೆ 10 ಗಂಟೆಗೆ.
ಈ ಸಂದರ್ಭದಲ್ಲಿ 'ಥಟ್ ಅಂತ ಹೇಳಿ' ಕಾರ್ಯಕ್ರಮವನ್ನು ಅತ್ಯಂತ ಶಿಸ್ತುಬದ್ಧವಾಗಿ ನಡೆಸುಕೊಂಡು ಬರುತ್ತಿರುವ ಡಾ.ನಾ. ಸೋಮೇಶ್ವರ ಹಾಗೂ ಅವರ ತಂಡವನ್ನು ಗೌರವಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ನಾಡೋಜ ದೇ.ಜವರೇಗೌಡ ಉದ್ಘಾಟಿಸಲಿದ್ದಾರೆ.
ಈ ಉತ್ಕೃಷ್ಟ ಕಾರ್ಯಕ್ರಮದ ವಿಶೇಷತೆಯೆಂದರೆ, ಕನ್ನಡನಾಡಿನ ಒಳ-ಹೊರೆಗುಗಳ, ಸುತ್ತಮುತ್ತಲಿನ ಜನಪದ ಪರಂಪರೆಯನ್ನು ಚೆನ್ನಾಗಿ ಉಳಿಸಿ-ಬೆಳಸುವ ನಿಟ್ಟಿನಲ್ಲಿ ಕನ್ನಡಿಗನೊಬ್ಬ ಹೇಗೆ ನಿರ್ವಹಿಸಬಹುದೆನ್ನುವುದನ್ನು ಎಲ್ಲರಿಗೂ ಮನದಟ್ಟುಮಾಡಿ ತೋರಿಸಿಕೊಟ್ಟಿದ್ದಾರೆ.
ಈಗಾಗಲೇ ಹಿಂದಿ, ಇಂಗ್ಲೀಷ್, ಮುಂತಾದ ಭಾಷೆಗಳಲ್ಲಿ ರಸಪ್ರಶ್ನೆ ಕಾರ್ಯಕ್ರಮಗಳು ಅದೆಷ್ಟೋ ಬಂದು ಹೋಗಿವೆ. ಆದರೆ ಕನ್ನಡದಲ್ಲಿ ಅದು ನಿರಂತರವಾಗಿ ಸಾಗಿದೆ ಎಂಬ ಹಿಗ್ಗಿದೆ. ಅದನ್ನಾದರೂ ಡಾ. ನಾ. ಸೋಮೇಶ್ವರ ಎಷ್ಟೊಂದು ಅಚ್ಚುಕಟ್ಟಾಗಿ ಹುಟ್ಟುಹಾಕಿದ್ದಾರೆ. ಇದನ್ನು ಕನ್ನಡದ ಪ್ರಥಮ ರಸಪ್ರಶ್ನೆ ಕಾರ್ಯಕ್ರಮ ಎಂದು ಹೇಳಬಹುದು.
ಕಾರ್ಯಕ್ರಮಕ್ಕೆ ಆಗಮಿಸುವ ಸಭಿಕರ ಹೆಸರುಗಳನ್ನು ಚೀಟಿಯಲ್ಲಿ ಬರೆದು ಮುಂದಿನ ರಸಪ್ರಶ್ನೆ ಕಾರ್ಯಕ್ರಮಕ್ಕೆ ಲಕ್ಕಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗುತ್ತದೆ. 'ಥಟ್ ಅಂತ ಹೇಳಿ' ಹಾಟ್ ಸೀಟ್ನಲ್ಲಿ ಕೂರುವ ಚಾನ್ಸ್ ನಿಮಗೂ ಸಿಗಬಹುದು.
ಸೋಮವಾರದಿಂದ ಶುಕ್ರವಾರದವರೆಗೆ 'ಥಟ್ ಅಂತ ಹೇಳಿ' ಕಾರ್ಯಕ್ರಮ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತದೆ. ರಾತ್ರಿ 10.30ರಿಂದ 11ರವರೆಗೆ ಪ್ರಸಾರವಾಗುವ ಈ ಕಾರ್ಯಕ್ರಮ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ಈ ವಿಭಿನ್ನ ರಸಪ್ರಶ್ನೆ ಕಾರ್ಯಕ್ರಮ ಮೆಗಾ ಧಾರಾವಾಹಿಗಳನ್ನು ಹಿಂದಿಕ್ಕಿ ಮುನ್ನುಗ್ಗುತ್ತಿದೆ.
ರಾತ್ರಿ ಕಾರ್ಯಕ್ರಮವನ್ನು ನೀವು ಮಿಸ್ ಮಾಡಿಕೊಂಡರೆ ಮಾರನೆ ದಿನ ಬೆಳಗ್ಗೆ 11ಕ್ಕೆ ಇದೇ ಕಾರ್ಯಕ್ರಮ ಮರುಪ್ರಸಾರವಾಗುತ್ತದೆ. ಮರುಪ್ರಸಾರದಲ್ಲಿ ಈ ಕಾರ್ಯಕ್ರಮವನ್ನು ನೋಡಿ ಆನಂದಿಸುವವರಿಗೂ ಕೊರತೆ ಇಲ್ಲ. ಒಟ್ಟಿನಲ್ಲಿ ಅಬಾಲವೃದ್ಧರಾಗಿ ಈ ಕಾರ್ಯಕ್ರಮ ಆಕರ್ಷಿಸುತ್ತಿದೆ.
ಅಂದಹಾಗೆ ಥಟ್ ಅಂತ ಹೇಳಿ ಕಾರ್ಯಕ್ರಮ ಆರಂಭವಾಗಿದ್ದು ಜನವರಿ 4, 2002ರಂದು. ಕಾರ್ಯಕ್ರಮ ಇಷ್ಟೊಂದು ಅಚ್ಚುಕಟ್ಟಾಗಿ ಮೂಡಿಬರಲು ನಿಲಯದ ನಿರ್ದೇಶಕ ಮಹೇಶ್ ಜೋಶಿ ಅವರ ಪಾತ್ರ ದೊಡ್ಡದು. ಹಾಗೆಯೇ ವೃತ್ತಿಯಲ್ಲಿ ವೈದ್ಯರೂ ಪ್ರವೃತ್ತಿಯಲ್ಲಿ ಬರಹಗಾರರೂ ಆದ ಡಾ.ನಾ.ಸೋಮೇಶ್ವರ್ ಅವರ ಕಳಕಳಿ ಸಹ ಕಾರ್ಯಕ್ರಮ ಸೊಗಸಾಗಿ ಮೂಡಿಬರಲು ಕಾರಣವಾಗಿದೆ.
ಅಮಿತಾಬ್ ಬಚ್ಚನ್ ನಡೆಸಿಕೊಡುತ್ತಿದ್ದ ಕೌನ್ ಬನೇಗ ಕರೋಡ್ ಪತಿ ಕಾರ್ಯಕ್ರಮದಂತೆ ಆರ್ಥಿಕ ಬಲವಿಲ್ಲದಿದ್ದರೂ ಥಟ್ ಅಂತ ಹೇಳಿ ಕಾರ್ಯಕ್ರಮ ಜನಪ್ರಿಯವಾಗಿರುವುದು ಹಲವರ ಹುಬ್ಬೇರಿಸಿದೆ. ಕಾರ್ಯಕ್ರಮದಲ್ಲಿ ನೀಡುವ ಉಪಯುಕ್ತ ಮಾಹಿತಿಗಳು, ಕನ್ನಡ ಪುಸ್ತಕಗಳು ಆಸಕ್ತರ ಜ್ಞಾನದಾಹದನ್ನು ತಣಿಸುತ್ತಿವೆ. ಮನೆಮಂದಿಯಲ್ಲಾ ಕುಳಿತು ನೋಡಬಹುದಾದ ಕಾರ್ಯಕ್ರಮ ಇದಾಗಿದೆ. (ಏಜೆನ್ಸೀಸ್)