Don't Miss!
- Automobiles 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದಲ್ಲಿ ಎರಡು ನವ ನವೀನ ಧಾರಾವಾಹಿಗಳು
ಪ್ರತಿಬಾರಿಯೂ ತನ್ನ ವೀಕ್ಷಕರಿಗೆ ಏನಾದರೂ ಹೊಸದನ್ನು ಕೊಡಲೆಂದು ಹವಣಿಸುತ್ತಿರುವ ಜೀ ಕನ್ನಡ ವಾಹಿನಿ ಇಂದೇ 14 ರಿಂದ ಮತ್ತೆರಡು ನವ ನವೀನ ಕಥೆ ಹಾಗೂ ನಿರೂಪಣೆಯುಳ್ಳ ಧಾರಾವಾಹಿಗಳನ್ನು ಪ್ರಾರಂಭಿಸುತ್ತಿದೆ.
ಬಹಳ ದಿನಗಳ ನಂತರ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅಭಿನಯಿಸುತ್ತಿರುವ 'ಒಂದೇ ಗೂಡಿನ ಹಕ್ಕಿಗಳು' ಹಾಗೂ ಯಶಸ್ವೀ 'ರಾಧಾ ಕಲ್ಯಾಣ' ನಿರ್ಮಾಪಕರಾದ ಅಶುಬೇದ್ರಾ ಅವರ ಮತ್ತೊಂದು ವಿನೂತನ ಕೃತಿ 'ಸಾಗರ ಸಂಗಮ' ಈ ಎರಡೂ ಧಾರವಾಹಿಗಳು ಏ.14 ರ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರವಾಗಲಿವೆ.
ಕೂಡು ಕುಟುಂಬದ ಕಥೆ ಹೊಂದಿರುವ 'ಒಂದೇ ಗೂಡಿನ ಹಕ್ಕುಗಳು' ಲಕ್ಷ್ಮೀಕಾಂತ್ ನಿರ್ಮಾಣ ಹಾಗೂ ಎಂ.ಎನ್.ಜಯಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಧಾರಾವಾಹಿ. ರಘು ಸಮರ್ಥ ಚಿತ್ರಕಥೆಯ ಹೊಣೆ ಹೊತ್ತಿದ್ದಾರೆ.
ಅನಾಥೆಯಾದ ನಾಯಕಿ ಹರಿಣಿಗೆ ಕೂಡು ಕುಟುಂಬದ ಸೊಸೆಯಾಗಬೇಕೆಂಬ ಆಸೆ. ತನ್ನಾಸೆಯಂತೆ ಆಕೆ ಅಂಥಾ ಮನೆಗೇ ಹೋಗುತ್ತಾಳೆ. ಒಳಹೊಕ್ಕನಂತರ ಅದು ಒಡೆದ ಮನಸ್ಸುಗಳ ಗೂಡು ಎಂದು ತಿಳಿಯುತ್ತದೆ. ಆ ಒಡೆದ ಮನೆಯನ್ನು ಹರಿಣಿ ತನ್ನ ಬುದ್ದಿವಂತಿಕೆಯಿಂದ ಹೇಗೆ ಒಂದು ಗೂಡಿಸುತ್ತಾಳೆ ಎನ್ನುವುದೇ 'ಒಂದೇ ಗೂಡಿನ ಹಕ್ಕಿಗಳು' ಧಾರಾವಾಹಿಯ ಸಾರಾಂಶ.
ನಟಿ ಜಯಂತಿ ಮಾತನಾಡಿ ಈ ಹಿಂದೆ ಮನೆತನ, ಅಮೃತವರ್ಷಿಣಿ ಧಾರವಾಹಿಗಳಲ್ಲಿ ಅಭಿನಯಿಸಿದ್ದೆ. ಜಯಂತ್ ಬಂದು ಈ ಕಥೆ ಹೇಳಿದಾಗ ಇಷ್ಟವಾಯ್ತು. ಕೂಡು ಕುಟುಂಬವೆಂದರೆ ನನಗೂ ತುಂಬಾ ಇಷ್ಟ. ಇಲ್ಲಿ ಕಲಾವಿದರು, ತಂತ್ರಜ್ಞರು, ಎನ್ನದೆ ಎಲ್ಲರೂ ಒಂದೇ ಕುಟುಂಬದ ಥರ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.
ಎಲ್ಲೋ ಹುಟ್ಟುವ ನದಿ ಅದೆಲ್ಲೋ ಹರಿದು ಕೊನೆಗೆ ಸಾಗರವನ್ನು ಸೇರುತ್ತದೆ. ಅಮೆರಿಕಾದಲ್ಲೇ ಚಿಕ್ಕಂದಿನಿಂದ ಬೆಳೆದ ನಾಯಕಿ ಶಾರ್ವರಿ ಯಾವುದೋ ಕಾರಣಕ್ಕೆ ಭಾರತಕ್ಕೆ ಬರುತ್ತಾಳೆ. ಆಕಸ್ಮಿಕವಾಗಿ ನಾಯಕನನ್ನು ಭೇಟಿಯಾಗಿ ವಿರುದ್ಧ ಸ್ವಭಾವದ ಆತನ ಜೊತೆಯಲ್ಲಿ ಇರುವಂಥ ಸಂದರ್ಭ ಆಕೆಗೆ ಒದಗಿ ಬರುತ್ತದೆ. ಉತ್ತರ ದಕ್ಷಿಣದಂತಿದ್ದ ಅವರಿಬ್ಬರ ನಡುವೆ ಪ್ರೀತಿ-ಪ್ರೇಮ ಹೇಗೆ ಬೆಳೆಯುತ್ತದೆ ಎನ್ನುವುದೇ 'ಸಾಗರ ಸಂಗಮ' ಧಾರಾವಾಹಿಯ ಸಾರಾಂಶ.
ಸಂಗೀತದ ಸಪ್ತಸ್ವರಗಳಿಂದಲೇ ಶೀರ್ಷಿಕೆಯನ್ನು ನಿರೂಪಿಸಿದ ಹೊಸ ಪ್ರಯತ್ನವನ್ನು ನಿರ್ಮಾಪಕ ಅಶುಬೆದ್ರೆ ಮಾಡಿದ್ದಾರೆ. ಕಿರಣ್ ಈ ಧಾರಾವಾಹಿಯ ನಿರ್ದೇಶಕರು, ಕಿರಣ್ ಈ ಹಿಂದೆ 'ಪಲ್ಲವಿ ಅನುಪಲ್ಲವಿ' ನಿರ್ದೇಶಿಸಿದ್ದರು. ಅಕ್ಷಯ್ ಸತ್ಯ ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ಬರೆದಿದ್ದಾರೆ. ಸ್ವಾತಿ, ಶೃತಿ ಜಯರಾಮ್, ನಮ್ರತಾ, ಉಷಾ, ಸಹನಾ, ತನುಜಾ, ನಾಗರಾಜ್ ಅಭಿನಯಿಸಿದ್ದಾರೆ. (ಏಜೆನ್ಸೀಸ್)