Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ 'ವೀಕೆಂಡ್'ನಲ್ಲಿ ಸಾಧಕರ ಸೀಟ್ ಮೇಲೆ ಎಚ್.ಡಿ.ದೇವೇಗೌಡ: ಮಿಸ್ ಮಾಡ್ಬೇಡಿ
ಈವರೆಗೆ ಹಲವಾರು ವಿಭಿನ್ನ ಶೈಲಿಯ ಧಾರಾವಾಹಿಗಳು, ಟಾಕ್ ಶೋ, ರಿಯಾಲಿಟಿ ಶೋ ಸೇರಿದಂತೆ ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ತನ್ನ ವೀಕ್ಷಕರಿಗಾಗಿ ನೀಡುತ್ತಾ ಬಂದಿರುವ ಜೀ ಕನ್ನಡ ವಾಹಿನಿ ಇತ್ತೀಚೆಗಷ್ಟೆ 'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮವನ್ನು ಆರಂಭಿಸಿತ್ತು.
ನ್ಯಾ.ಸಂತೋಷ್ ಹೆಗ್ಡೆ, ನಟ ವಿಜಯ್ ರಾಘವೇಂದ್ರ, ಅರ್ಜುನ್ ಜನ್ಯ, ಪ್ರಿಯಾಮಣಿ, ರಕ್ಷಿತ್ ಶೆಟ್ಟಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ವೇದಿಕೆಗೆ ಕರೆತಂದು, ಅವರು ನಡೆದು ಬಂದ ಹಾದಿಯನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಅನಾವರಣ ಮಾಡಿತ್ತು.
ಬ್ರೇಕಿಂಗ್ ನ್ಯೂಸ್: ಸಾಧಕರ ಸೀಟ್ ಮೇಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ.!
ಈಗ ಹಿರಿಯ ರಾಜಕಾರಣಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಸಾಧಕರ ಸೀಟ್ ನಲ್ಲಿ ಕೂರಿಸಿ, ಅವರ ಜೀವನ ಚರಿತ್ರೆಯನ್ನ 'ವೀಕೆಂಡ್ ಟೆಂಟ್' ಮೇಲೆ ಜೀ ಕನ್ನಡ ವಾಹಿನಿ ಜಗಜ್ಜಾಹೀರು ಮಾಡಲಿದೆ.
ಈಗ ಕಾಲ ಕೂಡಿ ಬಂತು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರವರನ್ನು ಸಾಧಕರ ಸೀಟ್ ಮೇಲೆ ಕೂರಿಸಬೇಕೆಂದು ಮೊದಲ ಸೀಸನ್ ನಿಂದಲೇ ಜೀ ಕನ್ನಡ ವಾಹಿನಿ ಪ್ರಯತ್ನ ಪಟ್ಟಿತ್ತಂತೆ. ಆದ್ರೆ, ಈಗ ಕಾಲ ಕೂಡಿ ಬಂದಿದೆ.
ಎಲ್ಲರೂ ಸ್ಫೂರ್ತಿದಾಯಕ
ಒಬ್ಬ ಕನ್ನಡಿಗನಾಗಿ ಹಳ್ಳಿಯಿಂದ ದಿಲ್ಲಿ ವರೆಗೆ ಸಾಗಿ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಎಚ್.ಡಿ.ದೇವೇಗೌಡ ರವರ ಜೀವನ ಚರಿತ್ರೆ ಎಲ್ಲರಿಗೂ ಖಂಡಿತ ಸ್ಫೂರ್ತಿದಾಯಕ.
ನಿಮಗೆ ಗೊತ್ತಿಲ್ಲದ ಸತ್ಯ ಸಂಗತಿಗಳು
ಎಚ್.ಡಿ.ದೇವೇಗೌಡ ರವರ ನೆನಪಿನ ಶಕ್ತಿ ಅಗಾಧವಾದದು. ಅವರ ಬಗ್ಗೆ ಅನೇಕರಿಗೆ ಗೊತ್ತಿಲ್ಲದ ಅದೆಷ್ಟೋ ವಿಷಯಗಳು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಬಹಿರಂಗವಾಗಲಿದೆ.
ಈ 'ವೀಕೆಂಡ್' ಮಿಸ್ ಮಾಡ್ಬೇಡಿ
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಎಚ್.ಡಿ.ದೇವೇಗೌಡ ಭಾಗವಹಿಸಿರುವ ಸಂಚಿಕೆ ಇದೇ ಶನಿವಾರ(10) ಹಾಗೂ ಭಾನುವಾರ(11) ರಾತ್ರಿ 9 ಗಂಟೆಗೆ ಪ್ರಸಾರ ಆಗಲಿದೆ.