Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೀಕೆಂಡ್' ಶೋಗೆ ಎಸ್.ಎಲ್.ಭೈರಪ್ಪ ಬರ್ತಾರಾ.? ರಾಘವೇಂದ್ರ ಹುಣಸೂರು ಏನಂದ್ರು.?
ಕಿರುತೆರೆಯಲ್ಲಿ ಸದ್ಯ ಭಾರಿ ಜನಪ್ರಿಯತೆ ಗಳಿಸಿರುವ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ಈ ಕಾರ್ಯಕ್ರಮಕ್ಕೆ ಅವರು ಬರಬೇಕು, ಇವರು ಬರಬೇಕು ಅಂತ ತುಂಬಾ ಜನ ತಮಗೆ ಇಷ್ಟವಾದ ಸಾಧಕರ ಹೆಸರನ್ನ ಆಗಾಗ ಹೇಳುತ್ತಾ ಇರುತ್ತಾರೆ. ಈಗ ಅದೇ ವೀಕ್ಷಕರ ಬಳಗದಿಂದ ಹಿರಿಯ ಸಾಹಿತಿ 'ಎಸ್.ಎಲ್.ಭೈರಪ್ಪ' ಸಾಧಕರ ಸೀಟ್ ನಲ್ಲಿ ಕೂರಬೇಕು ಎಂಬ ಕೂಗು ಕೇಳಿಬಂದಿದೆ.
ವೀಕೆಂಡ್ ವಿತ್ ರಮೇಶ್-3 ಕಾರ್ಯಕ್ರಮದಲ್ಲಿ ಹೆಚ್ಚಾಗಿ ಸಿನಿಮಾದವರನ್ನೇ ಕರೆಸುತ್ತಾರೆ ಎನ್ನುವ ಅಪವಾದದಿಂದ ಹೊರ ಬಂದು ಈ ಸೀಸನ್ ನಲ್ಲಿ ಪ್ರಾಣೇಶ್ ಮತ್ತು ರವಿ.ಡಿ ಚನ್ನಣ್ಣನವರ್ ಭಾಗವಹಿಸಿದ್ದರು. ಈಗ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಹಿರಿಯ ಸಾಹಿತಿ 'ಎಸ್.ಎಲ್.ಭೈರಪ್ಪ' ಅವರನ್ನ ಸಹ ಕರೆ ತರುವ ತಯಾರಿಗಳು ನಡೆಯುವ ಸಾಧ್ಯತೆ ಇದೆ.
ಅಂದಹಾಗೆ, ಎಸ್.ಎಲ್.ಭೈರಪ್ಪ ರವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬರ್ತಾರಾ.? ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ....
ಮೊದಲು ಶುರುವಾಗಿದ್ದು ಎಲ್ಲಿ.?
ಎಸ್.ಎಲ್.ಭೈರಪ್ಪ ಅವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎನ್ನುವುದು ಅನೇಕರ ಬಯಕೆ. ಈ ಕುರಿತು ಸಂಸದ ಪ್ರತಾಪ್ ಸಿಂಹ ಕೂಡ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಪ್ರತಾಪ್ ಸಿಂಹ ಫೇಸ್ ಬುಕ್ ನಲ್ಲಿ ಬರೆದಿರುವುದೇನು..?
''ಬೆಳಗಾವಿಯ ವಿವೇಕ ಎಂಬುವವರಿಂದ ಬಂದ ಸಲಹೆ: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ನಮ್ಮ ಹೆಮ್ಮೆಯ ಲೇಖಕರಾದ ಎಸ್.ಎಲ್.ಭೈರಪ್ಪನವರನ್ನು ಕರೆಸಿ ಎಂದು ಒತ್ತಾಯ ಮಾಡೋಣವೇ? ಒಪ್ಪಿಸುವ ದುಸ್ಸಾಹಸಕ್ಕೆ ನಾನೇ ಕೈ ಹಾಕುತ್ತೇನೆ'' ಹೀಗಂತ ಪ್ರತಾಪ್ ಸಿಂಹ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ರಾಘವೇಂದ್ರ ಹುಣಸೂರು ಉತ್ತರ
ಪ್ರತಾಪ್ ಸಿಂಹ ರವರ ಈ ಬೇಡಿಕೆಗೆ ಜೀ ಕನ್ನಡ ಬಿಜಿನೆಸ್ ಹೆಡ್ ಆದ ರಾಘವೇಂದ್ರ ಹುಣಸೂರು ಉತ್ತರಿಸಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದ್ದು, 'ಇಬ್ಬರು ಸೇರಿ ಭೈರಪ್ಪ ಅವರನ್ನ ಭೇಟಿ ಮಾಡೋಣ' ಅಂತ ಹೇಳಿದ್ದಾರೆ.
ಜನರ ಆಸೆಯೂ ಅದೇ..!
ಪ್ರತಾಪ್ ಸಿಂಹ ಅವರ ಈ ಪೋಸ್ಟ್ ಗೆ ಐದು ಸಾವಿರಕ್ಕೂ ಹೆಚ್ಚು ಜನರು ತಮ್ಮ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನೂರಾರು ಜನರು 'ಭೈರಪ್ಪ ಅವರ ಜೀವನದ ಬಗ್ಗೆ ತಿಳಿದುಕೊಳ್ಳಬೇಕು', 'ಅವರು ಈ ಕಾರ್ಯಕ್ರಮಕ್ಕೆ ಬರಬೇಕು' ಅಂತ ಕಾಮೆಂಟ್ ಮಾಡಿದ್ದಾರೆ.
ಭೈರಪ್ಪ ಬರ್ತಾರಾ..?
ಎಸ್.ಎಲ್.ಭೈರಪ್ಪ ಅವರು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬರ್ತಾರಾ ಅನ್ನೋದು ಇದೀಗ ಎಲ್ಲರ ತಲೆಯಲ್ಲಿ ಕಾಡುತ್ತಿರುವ ಪ್ರಶ್ನೆ.