ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಮದುವೆ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದರು. ಮದುವೆಯಾಗಿ ಕೆಲವೇ ಗಂಟೆಯಲ್ಲೇ ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ನಟಿ ಚೈತ್ರಾ ಕೋಟೂರ್ ದೊಡ್ಡ ವಿವಾದವನ್ನೇ ಮಾಡಿಕೊಂಡಿದ್ದರು.
ಮಂಡ್ಯ ಮೂಲಕ ನಾಗಾರ್ಜುನ್ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ತಾಳಿ ಕಟ್ಟಿಸಿಕೊಂಡಿದ್ದ ಚೈತ್ರಾ ವಿರುದ್ಧ ನಾಗಾರ್ಜುನ್ ಕುಟುಂಬದವರು ಬಲವಂತದ ಮದುವೆ ಎಂದು ಆರೋಪ ಮಾಡಿದ್ದರು. ಬಳಿಕ ಇಬ್ಬರು ಕುಟುಂಬದವರು ಪೋಲಿಸ್ ಠಾಣೆ ಮೆಟ್ಟಿಲೇರಿದ್ದರು. ಈ ಎಲ್ಲಾ ಬೆಳವಣಿಗೆ ಬಳಿಕ ನಾಗಾರ್ಜುನ್ ಚೈತ್ರಾ ಬಿಟ್ಟು ತನ್ನ ಕುಟುಂಬದ ಜೊತೆ ತೆರಳಿದ್ದರು.
ಇದರಿಂದ ಮನನೊಂದ ಚೈತ್ರಾ ಆತ್ಮಹತ್ಯೆಗೂ ಯತ್ನಿಸಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಚೈತ್ರಾ ಈಗ ಮತ್ತೆ ಹೊಸ ಹುರುಪಿನೊಂದಿಗೆ ವಾಪಸ್ ಆಗಿದ್ದಾರೆ. ಇತ್ತೀಚಿಗಷ್ಟೆ ನಾಗಾರ್ಜುನ್ ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ವಿಡಿಯೋ ಮೂಲಕ ಕಣ್ಣೀರಿಟ್ಟ ಚೈತ್ರಾ ಈಗ ನಗುತ್ತಾ ವಾಪಸ್ ಆಗಿದ್ದಾರೆ.