ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆಗುತ್ತಿರುವ ಕಾರಣ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇಂದು ಹೊಸ ಮಾರ್ಗಸೂಚಿ ಹೊರಡಿಸಿದ್ದು, ರಾಜ್ಯದಾದ್ಯಂತ ಚಿತ್ರಮಂದಿರಗಳು ಸಂಪೂರ್ಣ ಬಂದ್ ಆಗಲಿವೆ.
ಚಿತ್ರಮಂದಿರಗಳು ಮಾತ್ರವಲ್ಲದೆ ರಂಗಮಂದಿರಗಳು, ಆಡಿಟೋರಿಯಮ್ಗಳು, ಮಾಲ್ಗಳು, ಮನೊರಂಜನಾತ್ಮಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳು ಸಹ ಬಂದ್ ಆಗಲಿವೆ.
ಏಪ್ರಿಲ್ 3 ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ಚಿತ್ರಮಂದಿರಗಳಲ್ಲಿ 50% ಪ್ರೇಕ್ಷಕರಿಗಷ್ಟೆ ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಪುನೀತ್ ರಾಜ್ಕುಮಾರ್ ಹಾಗೂ ಇತರ ಸಿನಿಮಾ ಸೆಲೆಬ್ರಿಟಿಗಳ ಮನವಿ ಮೇರೆಗೆ ನಿರ್ಬಂಧವನ್ನು ಸಡಿಲಿಸಿ ಮತ್ತೆ ಏಪ್ರಿಲ್ 7 ರಿಂದ 50% ಆಕ್ಯುಪೆನ್ಸಿ ಆದೇಶ ಮಾಡಲಾಯಿತು. ಇದೀಗ ಪೂರ್ಣವಾಗಿ ಚಿತ್ರಮಂದಿರಗಳನ್ನು ಬಂದ್ ಮಾಡುವಂತೆ ಆದೇಶ ಹೊರಬಿದ್ದಿದೆ.