ದಳಪತಿ ವಿಜಯ್ ನಟನೆಯ 'ಜನನಾಯಗನ್' ಸಿನಿಮಾ ಮುಂದಿನ ವಾರ ತೆರೆಗೆ ಬರಲಿದೆ. ಬೆಂಗಳೂರಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಶುರುವಾಗಿದೆ. ಈಗಾಗಲೇ ಸಿನಿಮಾ ಪೈರಸಿ ಆಗಿದ್ದರೂ ದೊಡ್ಡಮಟ್ಟದಲ್ಲಿ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ ಚಿತ್ರದಲ್ಲಿ ಒಂದಷ್ಟು ಬದಲಾವಣೆ ಮಾಡಿರುವುದಾಗಿ ನಿರ್ಮಾಪಕ ವೆಂಕಟ್ ಕೊನಂಕಿ ಹೇಳಿದ್ದಾರೆ.

Advertisement

ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಬಹುಕೋಟಿ ವೆಚ್ಚದಲ್ಲಿ 'ಜನನಾಯಗನ್' ಸಿನಿಮಾ ನಿರ್ಮಾಣ ಮಾಡಿದೆ. ಆದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿ ಅಂತಿಮವಾಗಿ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. 3 ತಿಂಗಳ ಹಿಂದೆ ಆನ್ಲೈನ್‌ನಲ್ಲಿ ಲೀಕ್ ಆಗಿ ಕೋಟ್ಯಂತರ ಜನ ನೋಡಿದ ಮೇಲೆ ಸಿನಿಮಾ ಬಿಡುಗಡೆ ಆಗಿರುತ್ತಿರುವುದು ಇದೇ ಮೊದಲು ಅನ್ನಿಸುತ್ತದೆ. ಈ ಹಿಂದೆ ಕೂಡ ಕೆಲ ಸಿನಿಮಾಗಳು ಇದೇ ರೀತಿ ಲೀಕ್ ಆಗಿದ್ದವು. ಆದರೂ ಕೂಡಲೇ ಸಿನಿಮಾ ರಿಲೀಸ್ ಮಾಡಿ ನಷ್ಟದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಲಾಗಿತ್ತು. ಆದರೆ 'ಜನನಾಯಗನ್' ವಿಚಾರದಲ್ಲಿ ಎಲ್ಲವೂ ಹೊಸದು ಎನ್ನುವಂತಾಗಿದೆ.

Advertisement

ಈಗಾಗಲೇ ಸಿನಿಮಾ ಲೀಕ್ ಆಗಿರುವುದರಿಂದ ಒಂದಷ್ಟು ಬದಲಾವಣೆ ಮಾಡಿ ಹೊಸ ರೂಪದಲ್ಲಿ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಮುಂದಾಗಿದೆ. ಈ ವಿಚಾರವನ್ನು ಸ್ವತಃ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಸ್ಥಾಪಕ, ನಿರ್ಮಾಪಕ ವೆಂಕಟ್ ಕೊನಂಕಿ ಸ್ಪಷ್ಟಪಡಿಸಿದ್ದಾರೆ. NDTV TV ವಾಹಿನಿ ಸಂದರ್ಶನದಲ್ಲಿ ಅವರ ಮಾತನಾಡಿದ್ದಾರೆ. "ಚಿತ್ರದಲ್ಲಿ ಸಾಕಷ್ಟು ಬದಲಾವಣೆ, ಹೊಸ ದೃಶ್ಯಗಳ ಸೇರ್ಪಡೆ ಮಾಡಿದ್ದೇವೆ. ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಹೊಸ ಅನುಭವ ಸಿಗಲಿದೆ. ಒಂದಷ್ಟು ಹಾಡುಗಳನ್ನು ಸೇರಿಸಿದ್ದೀವಿ. ವರ್ಷದ ಆರಂಭದಲ್ಲೇ ಸಿನಿಮಾ ಬರಬೇಕಿತ್ತು. ಸಾಕಷ್ಟು ಸಂಕಷ್ಟಗಳನ್ನು ಎದುರಿಸಿ ಈಗ ಬಿಡುಗಡೆ ಆಗುತ್ತಿದೆ" ಎಂದು ತಿಳಿಸಿದ್ದಾರೆ.