Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಅಭಿಮಾನಿಗಳಿಗೆ ಅಮೀರ್ ಖಾನ್ ಉಪದೇಶ
ಯುವಜನಾಂಗದ ಹಾಟ್ ಫೇವರೆಟ್ ಆಗಿರುವ ಅಮೀರ್ ಖಾನ್ ಯುಜನಾಂಗಕ್ಕೆ ಹಿತೋಪದೇಶವೊಂದನ್ನು ನೀಡಿದ್ದಾರೆ. ಫೇಸ್ ಬುಕ್, ಟ್ವಿಟ್ಟರ್ ಮುಂತಾದ ಸಾಮಾಜಿಕ ತಾಣಗಳ ಚಟುವಟಿಕೆಗಳನ್ನು ಬಹಳಷ್ಟು ಕಡಿತಗೊಳಿಸಿ ಸಮಯದ ಸದುಪಯೋಗ ಮಾಡಿಕೊಳ್ಳಿ" ಎಂದಿದ್ದಾರೆ. ಸಾಮಾಜಿಕ ತಾಣಗಳ ಅತಿಯಾದ ಬಳಕೆ ಸರಿಯಲ್ಲ ಎಂಬ ಕಿವಿಮಾತನ್ನೂ ಹೇಳಿದ್ದಾರೆ.
ಯುವಜನಾಂಗ ಎಲ್ಲಾ ಮಾಹಿತಿಯನ್ನು ಫೇಸ್ ಬುಕ್ ಮೂಲಕ ಪಡೆಯುವದಾಗಲೀ ಕೊಡುವುದಾಗಲೀ ಮಾಡುತ್ತಾ ಸಮಯವನ್ನು ವ್ಯರ್ಥ ಮಾಡುತ್ತಿದೆ. ಇದೇ ವೇಳೆಯನ್ನು ಸದುಪಯೋಗ ಪಡಿಸಿಕೊಂಡು ಯಾವುದಾದರೂ ಲಾಭದಾಯಕ ಕೆಲಸದಲ್ಲಿ ತೊಡಗಿಕೊಳ್ಳಿ" ಎಂದಿದ್ದಾರೆ ಬಾಲಿವುಡ್ ನ ಮಿ. ಪರ್ಫೆಕ್ಟ್. ಅಮೀರ್ ಖಾನ್ ಮಾತು ಸಾಮಾಜಿಕ ತಾಣಗಳನ್ನೇ ಗುರಿಯಾಗಿಸಿಕೊಂಡಿದೆ.
ಬಾಲಿವುಡ್ ನಲ್ಲಿ ಬಹಳಷ್ಟು ಸಾಧನೆ ಮಾಡಿ ತನ್ನದೇ ಆದ ಸ್ಥಾನ ಗಳಿಸಿಕೊಂಡಿರುವ ಅಮೀರ್ ಮಾತಿಗೆ ಎಲ್ಲರೂ ಬೆಲೆ ಕೊಡುತ್ತಾರೆ. ಇನ್ನು ಅವರ ಅಭಿಮಾನಿಗಳು ಅನುಸರಿಸದೇ ಇರುತ್ತಾರೆಯೇ? ಇನ್ನಾದರೂ ಅಮೀರ್ ಯುವ ಅಭಿಮಾನಿಗಳು ಸಾಮಾಜಿಕ ತಾಣಗಳ ಚಟುವಟಿಕೆಯಲ್ಲಿ ಸಮಯವನ್ನು ವ್ಯರ್ಥ ಮಾಡಲಿಕ್ಕಿಲ್ಲವೆಂದು ಆಶಿಸೋಣವೇ! (ಏಜೆನ್ಸೀಸ್)