Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೂಪದರ್ಶಿ ಪೂನಂ ಪಾಂಡೆಗೆ ಕಿಡ್ನಿ ಕಲ್ಲಿನ ಶಸ್ತ್ರಚಿಕಿತ್ಸೆ
ಏನೇನೋ ಕನಸು ಕಂಡಿದ್ದ ರೂಪದರ್ಶಿ ಪೂನಂ ಪಾಂಡೆಗೆ ಪಾಪ ಹೀಗಾಗಬಾರದಿತ್ತು. ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗಿ ತಂಡದಲ್ಲಿ ಹೊಸ ಸ್ಫೂರ್ತಿ ತುಂಬುವುದಾಗಿ ಪೂನಂ ಹೇಳಿದ್ದರು. ದುರಂತ ಎಂದರೆ ಆಕೆಯ ಕನಸು ಮತ್ತೊಂದು ವಿಧದಲ್ಲಿ ನನಸಾಗಿದೆ. ಕಿಡ್ನಿ ಕಲ್ಲಿನ ಶಸ್ತ್ರ ಚಿಕಿತ್ಸೆಗಾಗಿ ಆಕೆ ಆಸ್ಪತ್ರೆಯಲ್ಲಿ ಬೆತ್ತಲಾಗಿದ್ದಾರೆ.
ಹೊಟ್ಟೆಯಲ್ಲಿ ಅಸಾಧ್ಯ ನೋವಿನ ಕಾರಣ ಸೋಮವಾರ(ಏ.4) ರಾತ್ರಿ ಆಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಕಿಡ್ನಿಯಲ್ಲಿ ಕಲ್ಲು ಇರುವುದಾಗಿ ಹೇಳಿದರು. ಬಳಿಕ ಆಕೆಗೆ ಶಸ್ತ್ರಚಿಕಿತ್ಸೆಯನ್ನು ಮಾಡಿ ಕಿಡ್ನಿ ಕಲ್ಲುಗಳನ್ನು ಹೊರತೆಗೆದಿದ್ದಾರೆ. ಮಂಗಳವಾರ ರಾತ್ರಿ ಆಕೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾಗಿಆಕೆಯ ಪತ್ರಿಕಾ ಪ್ರಚಾರಕ ವಿವರ ನೀಡಿದ್ದಾನೆ.
ಬಳಿಕ ಚೇತರಿಸಿಕೊಂಡ ಆಕೆ ಟ್ವಿಟ್ಟರ್ನಲ್ಲೂ ತನ್ನ ಚಿಕಿತ್ಸೆ ಬಗ್ಗೆ ಬರೆದುಕೊಂಡಿದ್ದಾರೆ. ಈಗಲೂ ತಾವು ತಮ್ಮ ಮಾತಿಗೆ (ಬೆತ್ತಲಾಗುವ)ಬದ್ಧರಾಗಿರುವುದಾಗಿಯೂ ಒತ್ತಿ ಹೇಳಿದ್ದಾರೆ. ಅಂದಹಾಗೆ ಆಕೆ ಬರೆದಿರುವ ಸುದೀರ್ಘ ಪತ್ರಕ್ಕೆ ಬಿಸಿಸಿಐನಿಂದ ಇದುವರೆಗೂ ಯಾವುದೇ ಉತ್ತರ ಬಂದಿಲ್ಲ. ಉತ್ತರಕ್ಕಾಗಿ ಇನ್ನೂ ಪೂನಂ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಆಕೆಯ ಪರ ವಕೀಲ ಪ್ರಶಾಂತ್ ಉಚಿಲ್ ತಿಳಿಸಿದ್ದಾರೆ.