Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತ ರತ್ನ ಪ್ರಶಸ್ತಿಗೆ ದೀಪಿಕಾ ಪಡುಕೋಣೆ ಡಿಮ್ಯಾಂಡ್
ಬಾಡ್ಮಿಂಟನ್ ಕ್ರೀಡೆಯಲ್ಲಿನ ಅಪ್ಪನ ಸಾಧನೆಯನ್ನು ಗಮನಿಸಿ ಪ್ರಕಾಶ್ ಪಡುಕೋಣೆ ಅವರಿಗೆ ಭಾರತ ರತ್ನ ನೀಡುವಂತೆ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಮತ್ತೊಮ್ಮೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಹಿಂದೊಮ್ಮೆಯೂ ದೀಪಿಕಾ ಅಪ್ಪನ ಪರ ವಕಾಲತ್ತು ವಹಿಸಿ ಮಾತನಾಡಿದ್ದರು. ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಭಾರತ ರತ್ನಕ್ಕೆ ಪ್ರಕಾಶ್ ಪಡುಕೋಣೆ ಸಂಪೂರ್ಣ ಅರ್ಹರು ಎಂಬುದು ದೀಪಿಕಾರ ವಾದ.
"ಬ್ಯಾಡ್ಮಿಂಟನ್ ಆಟದಲ್ಲಿನ ಅವರ ಸಾಧನೆಯನ್ನು ಗಮನಿಸಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಿ. ಅವರ ಮಗಳಾಗಿ ನನ್ನ ಬಯಕೆ ಇಷ್ಟೆ" ಎಂದಿದ್ದಾರೆ ದೀಪಿಕಾ.
ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್ ಗೆದ್ದ ಮೊದಲ ಭಾರತೀಯ ಪ್ರಕಾಶ್ ಪಡುಕೋಣೆ ಅವರು. ದೇಶದಲ್ಲಿ ಬ್ಯಾಂಡ್ಮಿಟನ್ ಕ್ರೀಡೆಗೆ ಜನಪ್ರಿಯತೆ ತಂದುಕೊಟ್ಟ ಹೆಗ್ಗಳಿಕೆ ಅವರದು ಎಂದಿದ್ದಾರೆ.
ದೀಪಿಕಾ ತಮ್ಮ ಮುಂದಿನ ಚಿತ್ರ 'ದೇಸಿ ಬಾಯ್ಸ್' ಪ್ರಚಾರದಲ್ಲಿ ಮಾತನಾಡುತ್ತಾ 'ಭಾರತ ರತ್ನ' ಪ್ರಶಸ್ತಿಯ ಬಗ್ಗೆ ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್, ಚಿತ್ರಾಂಗದ ಸಿಂಗ್ ಕೂಡ ಉಪಸ್ಥಿತರಿದ್ದರು.
ಡೇವಿಡ್ ಧವನ್ ಮಗ ರೋಹಿತ್ ಧವನ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದೆ. ಪಾತ್ರವರ್ಗದಲ್ಲಿ ಜಾನ್ ಅಬ್ರಹಾಂ ಸಹ ಇದ್ದಾರೆ. ಈಗ ವಾದ ಮಾಡುವ ಸರದಿ ನಿಮ್ಮದು. ಪಡುಕೋಣೆಗೆ ಭಾರತ ರತ್ನ ನೀಡಬೇಕಾ ಅಥವಾ ಬೇಡವಾ ? (ಏಜೆನ್ಸೀಸ್)