Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾರುಖ್ ಖಾನ್ ವಿರುದ್ಧ ಎಫ್ ಐಆರ್ ದಾಖಲು
ಪ್ರವಾದಿ ಮಹಮ್ಮದ್ ರ ಬಗ್ಗೆ ನಾನು ಯಾವುದೇ ಅಪಚಾರ ಮಾಡಿಲ್ಲ.ನನ್ನ ವಿರುದ್ಧ ಮಾಡಿರುವ ಆರೋಪ ಸುಳ್ಳು. ಇದು ಬರವಣಿಗೆಯಲ್ಲಿ ಆದ ದೋಷವೇ ಹೊರತು ನನ್ನ ದೃಷ್ಟಿಕೋನವಲ್ಲ ಎಂದು ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಆದರೆ ಮುಂಬೈನ ಬಾಂದ್ರಾ ಪೊಲೀಸರು ಶಾರುಖ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಮುಸ್ಲಿಂರ ಮನಸ್ಸನ್ನ್ನು ನೋಯಿಸುವ ಹೇಳಿಕೆ ನೀಡಿದ್ದಾರೆ ಎಂದು ನ್ಯಾಯವಾಧಿಯೊಬ್ಬರು ದೂರು ನೀಡಿದ ಬಳಿಕ ನಾವು ಶಾರುಖ್ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದೇವೆ ಎಂದು ಬಾಂದ್ರ ಪೊಲೀಸ್ ಠಾಣೆಯ ಹಿರಿಯ ನಿರೀಕ್ಷಕ ಪ್ರಕಾಶ್ ಜಾರ್ಜ್ ಹೇಳಿದ್ದಾರೆ.
ಶಾರುಖ್ ಮತ್ತು ಅವರ ಹೇಳಿಕೆಯನ್ನು ಪ್ರಕಟಿಸಿರುವ ಪತ್ರಿಕೆಯ ಸಂಪಾದಕರ ವಿರುದ್ಧವೂ ದೂರು ದಾಖಲಿಸಲಾಗಿದೆ. ಟೈಮ್ಸ್ ಅಂಡ್ ಸ್ಟೈಲ್ ಪತ್ರಿಕೆ ಜುಲೈ ತಿಂಗಳಲ್ಲಿ ಪ್ರವಾದಿಯ ಬಗ್ಗೆ ಮುಸ್ಲಿಂರಿಗೆ ಸಮ್ಮತವಲ್ಲದ ಹೇಳಿಕೆಯನ್ನು ನೀದಿದ್ದರು.
ಪ್ರಸ್ತುತ ಕರಣ್ ಜೋಹಾರ್ ನಿರ್ದೇಶಿಸುತ್ತಿರುವ 'ಮೈ ನೇಮ್ ಈಸ್ ಖಾನ್' ಚಿತ್ರೀಕರಣಕ್ಕಾಗಿ ಶಾರುಖ್ ವಿದೇಶದಲ್ಲಿದ್ದಾರೆ. ಅಲ್ಲಿಂದಲೇ ಪ್ರತಿಕ್ರಿಯಿಸಿರುವ ಶಾರುಖ್, ಮಹಮ್ಮದ್ ರಿಗಿಂತಲೂ ಪ್ರಮುಖ ವ್ಯಕ್ತಿ ಇತಿಹಾಸದಲಿಲ್ಲ ಎಂದಿದ್ದಾರೆ. ಮುಸ್ಲಿಂರಿಗೆ ಮತ್ತು ಇಸ್ಲಾಂರಿಗೆ ಬದ್ಧವಾಗಿರುವ ತನಗೆ ಪ್ರವಾದಿ ಮಹಮ್ಮದ್ ಪ್ರಮುಖ ವ್ಯಕ್ತಿ ಎಂದು ಹೇಳಿದ್ದಾರೆ.
(ಏಜೆನ್ಸೀಸ್)