Just In
Don't Miss!
- Automobiles
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
- News
ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಾನು ಮ್ಯಾಚ್ ನೋಡಿದರೆ ಭಾರತ ಗೆಲ್ಲಲ್ಲ: ಅಭಿಷೇಕ್
ಇದನ್ನು ಮೂಢನಂಬಿಕೆ ಎನ್ನಬೇಕೋಅಥವಾ ಅವರವರ ಭಾವ, ಭಕುತಿ ಎನ್ನಬೇಕೋ ತಿಳಿಯುತ್ತಿಲ್ಲ. ಅಭಿಷೇಕ್ ಬಚ್ಚನ್ ಯಾವಾಗ ಟಿವಿಯಲ್ಲಿ ಕ್ರಿಕೆಟ್ ಮ್ಯಾಚ್ ನೋಡುತ್ತಾರೋ ಅಂದು ಭಾರತ ಸೋಲುತ್ತಂತೆ. ಹಾಗಾಗಿ ಅವರು ಟಿವಿಯಲ್ಲಿ ಕ್ರಿಕೆಟ್ ಮ್ಯಾಚ್ ನೋಡುವುದನ್ನೇ ಬಿಟ್ಟಿದ್ದಾರಂತೆ. ಹಾಗಂತ ಅವರೇ ಹೇಳಿದ್ದಾರೆ. ಹಾಗಿದ್ದರೆ ಸ್ಕೋರ್ ವಿವರ ಹೇಗೆ ತಿಳಿದುಕೊಳ್ಳುತ್ತಾರೆ. ಇಂಟರ್ನೆಟ್ ಅಥವಾ ಗೆಳೆಯರಿಗೆ ಫೋನ್ ಹಾಯಿಸಿ ತಿಳ್ಕೋತೀನಿ ಅಂತಾರೆ ಅವರು.
ಏಪ್ರಿಲ್ 1ರಂದು ಬಿಡುಗಡೆಗೆ ಸಜ್ಜಾಗಿರುವ ತಮ್ಮ ಹೊಸ ಚಿತ್ರ 'ಗೇಮ್ 'ಪ್ರಚಾರಕ್ಕಾಗಿ ಇತ್ತೀಚೆಗೆ ಅಭಿಷೇಕ್ ಬೆಂಗಳೂರಿಗೆ ಬಂದಿದ್ದರು. ಕೋರಮಂಗಲದ ಫೋರಂನಲ್ಲಿ ತಮ್ಮ ಅಭಿಮಾನಿಗಳನ್ನು ಅಭಿಷೇಕ್ ಮುಖಾಮುಖಿಯಾಗಿದ್ದರು. ಈ ಸಂದರ್ಭದಲ್ಲಿ ಅಭಿಮಾನಿಗಳು ಅವರನ್ನು ಕ್ರಿಕೆಟ್ ಮ್ಯಾಚ್ ನೋಡುವ ಹುಚ್ಚು ನಿಮಗೂ ಇದೆಯೇ ಎಂಬ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ.
'ಗೇಮ್' ಚಿತ್ರದ ನಾಯಕಿಯರಾದ ಕಂಗನಾ ರನಾವತ್, ಸಾರಾ ಜೇನ್ ಕೂಡ ಉಪಸ್ಥಿತರಿದ್ದರು. ಗೇಮ್ ಚಿತ್ರದ ಬಗ್ಗೆ ಅಭಿಮಾನಿಗಳನ್ನು ಅವರು ಪ್ರಶ್ನೆಗಳನ್ನು ಕೇಳಿದರು. ಸರಿಯಾದ ಉತ್ತರ ಕೊಟ್ಟವರು ಮುಂಬೈನಲ್ಲಿ ನಡೆಯುವ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸುವ ಚಾನ್ಸ್ ಸಿಕ್ಕಲಿದೆ. ಅಭಿಷೇಕ್ ಕೇಳಿದ ಕೊನೆಯ ಪ್ರಶ್ನೆಗೆ ಸಚಿನ್ ಕಶ್ಯಪ್ ಸರಿಯಾದ ಉತ್ತರ ನೀಡಿ ಅಂತಿಮ ಸ್ಪರ್ಧೆಗೆ ಬೆಂಗಳೂರಿನಿಂದ ಆಯ್ಕೆಯಾಗಿದ್ದಾರೆ.