Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟ ಅಮೀರ್ ಖಾನ್ ಗೆ 'ಪದ್ಮಭೂಷಣ' ಪ್ರಶಸ್ತಿ
ಅರುವತ್ತನೇ ಗಣರಾಜ್ಯೋತ್ಸವ ಪ್ರಯುಕ್ತ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಪ್ರತಿಷ್ಠಿತ 'ಪದ್ಮ ಭೂಷಣ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 'ತ್ರಿ ಇಡಿಯಟ್ಸ್' ಚಿತ್ರದ ಗೆಲುವಿನ ಖುಷಿಯಲ್ಲಿರುವ ಅಮೀರ್ ಖಾನ್ ಅವರ ಸಂಭ್ರಮವನ್ನು ಪ್ರಶಸ್ತಿ ಇಮ್ಮಡಿಸಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಹಾಗೂ ಮಲ್ಲಿಕಾ ಸಾರಾಬಾಯ್ ಅವರನ್ನೂ 'ಪದ್ಮಭೂಷಣ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಖ್ಯಾತ ಬಾಲಿವುಡ್ ಅಭಿನೇತ್ರಿ ರೇಖಾ ಹಾಗೂ ನಟ ಸೈಫ್ ಆಲಿ ಖಾನ್ ಅವರೊಂದಿಗೆ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಹಾಗೂ ಬ್ಯಾಡ್ಮಿಟನ್ ತಾರೆ ಸೈನಾ ನೆಹ್ವಾಲ್ ಅವರನ್ನು' ಪದ್ಮಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದ ಹೆಸರಾಂತ ನಟ ಜೋಹ್ ರಾ ಸೆಹ್ಗಲ್ ಅವರ ಹೆಸರನ್ನು 'ಪದ್ಮಶ್ರೀ' ಪ್ರಶಸ್ತಿಗೆ ಸೂಚಿಸಲಾಗಿದೆ ಎನ್ನುತ್ತವೆ ಮೂಲಗಳು.
ನಲವತ್ತು ನಾಲ್ಕರ ಹರೆಯದ ಅಮೀರ್ ಖಾನ್ 2007ರಲ್ಲಿ ತಮ್ಮ ಚೊಚ್ಚಲ ನಿರ್ದೇಶನದ 'ತಾರೆ ಜಮೀನ್ ಫರ್' ಮೂಲಕ ಗಮನಸೆಳೆದಿದ್ದರು. ಇದೀಗ 'ತ್ರಿ ಇಡಿಯಟ್ಸ್' ಚಿತ್ರ ಬಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿರುವುದು ಗೊತ್ತೆ ಇದೆ.