Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟ ಅಮೀರ್ ಖಾನ್ ಗೆ 'ಪದ್ಮಭೂಷಣ' ಪ್ರಶಸ್ತಿ
ಅರುವತ್ತನೇ ಗಣರಾಜ್ಯೋತ್ಸವ ಪ್ರಯುಕ್ತ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಪ್ರತಿಷ್ಠಿತ 'ಪದ್ಮ ಭೂಷಣ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 'ತ್ರಿ ಇಡಿಯಟ್ಸ್' ಚಿತ್ರದ ಗೆಲುವಿನ ಖುಷಿಯಲ್ಲಿರುವ ಅಮೀರ್ ಖಾನ್ ಅವರ ಸಂಭ್ರಮವನ್ನು ಪ್ರಶಸ್ತಿ ಇಮ್ಮಡಿಸಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಹಾಗೂ ಮಲ್ಲಿಕಾ ಸಾರಾಬಾಯ್ ಅವರನ್ನೂ 'ಪದ್ಮಭೂಷಣ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಖ್ಯಾತ ಬಾಲಿವುಡ್ ಅಭಿನೇತ್ರಿ ರೇಖಾ ಹಾಗೂ ನಟ ಸೈಫ್ ಆಲಿ ಖಾನ್ ಅವರೊಂದಿಗೆ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಹಾಗೂ ಬ್ಯಾಡ್ಮಿಟನ್ ತಾರೆ ಸೈನಾ ನೆಹ್ವಾಲ್ ಅವರನ್ನು' ಪದ್ಮಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದ ಹೆಸರಾಂತ ನಟ ಜೋಹ್ ರಾ ಸೆಹ್ಗಲ್ ಅವರ ಹೆಸರನ್ನು 'ಪದ್ಮಶ್ರೀ' ಪ್ರಶಸ್ತಿಗೆ ಸೂಚಿಸಲಾಗಿದೆ ಎನ್ನುತ್ತವೆ ಮೂಲಗಳು.
ನಲವತ್ತು ನಾಲ್ಕರ ಹರೆಯದ ಅಮೀರ್ ಖಾನ್ 2007ರಲ್ಲಿ ತಮ್ಮ ಚೊಚ್ಚಲ ನಿರ್ದೇಶನದ 'ತಾರೆ ಜಮೀನ್ ಫರ್' ಮೂಲಕ ಗಮನಸೆಳೆದಿದ್ದರು. ಇದೀಗ 'ತ್ರಿ ಇಡಿಯಟ್ಸ್' ಚಿತ್ರ ಬಾಲಿವುಡ್ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿರುವುದು ಗೊತ್ತೆ ಇದೆ.