Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೀರ್ ಖಾನ್ ವಿರುದ್ಧ ಈಗ ಜಾಮೀನು ರಹಿತ ವಾರೆಂಟ್
ಭೂಪಾಲ್, ಅ.25 : ಅಮೀರ್ ಖಾನ್ ವಿರುದ್ಧ ಭೂಪಾಲ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪ ಎದುರಿಸುತ್ತಿರುವ ಖಾನ್ ವಿಚಾರಣೆಗಾಗಿ ಹಾಜರಾಗದೆ 3ಬಾರಿ ಕೋರ್ಟ್ ಆಜ್ಞೆಯನ್ನು ಉಲ್ಲಂಘಿಸಿದ್ದಾರೆ. ಈ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿದೆ.
ಕೋರ್ಟ್ನ ಯಾವುದೇ ಆದೇಶ ಗೊತ್ತಿಲ್ಲದ ಕಾರಣ ಅವರು ಹಾಜರಾಗಲು ವಿಫಲರಾಗಿದ್ದಾರೆ ಎಂದು ವಿವರಣೆ ನೀಡಲು ಅಮೀರ್ ಖಾನ್ ವಕೀಲರು ಪ್ರಯತ್ನಿಸಿದರು. ಆದರೆ, ಅವರ ವಾದವನ್ನು ತಿರಸ್ಕರಿಸಿದ ದಂಡಾಧಿಕಾರಿಗಳು ನ.7ರಂದು ಅಮೀರ್ ಖಾನ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ಪೋಲೀಸರಿಗೆ ಆಜ್ಞಾಪಿಸಿದ್ದಾರೆ.
ಹಿನ್ನೆಲೆ : ಕಾರು ಕಂಪನಿಯೊಂದರ ರಾಯಭಾರಿಯಾಗಿದ್ದ ಅಮೀರ್ ಖಾನ್, ಜಾಹೀರಾತಿನಲ್ಲಿ ಭಾಗವಹಿಸಲು ಆಗಸ್ಟ್ನಲ್ಲಿ ಇಂಧೋರ್ಗೆ ಬಂದಿದ್ದರು. ಆ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ನಡೆದಿದೆ ಎಂದು ಸ್ಥಳೀಯ ವಕೀಲರೊಬ್ಬರು ಆರೋಪಿಸಿ, ಅಮೀರ್ ಖಾನ್ ವಿರುದ್ಧ ದೂರು ದಾಖಲಿಸಿದ್ದರು.
ರಾಷ್ಟ್ರಧ್ವಜ ಕಾರಿನ ಮೇಲ್ಚಾವಣಿಗೆ ಅಂಟಿಕೊಂಡಿತ್ತು. ಕಾರ್ಯಕ್ರಮ ಮುಗಿದ ಮೇಲೂ ರಾತ್ರಿಯಲ್ಲಾ ಅದು ಹಾಗೆಯೇ ಇತ್ತು. ಈ ವಿಚಾರವಾಗಿ ಕೋರ್ಟ್ ನನ್ನ ದೂರನ್ನು ಅಂಗೀಕರಿಸಿ ಅಮೀರ್ ಖಾನ್ಗೆ ಹಾಜರಾಗಲು ಆದೇಶಿಸಿತು. ಎರಡು ಬಾರಿ ವಾರೆಂಟ್ ಹೊರಡಿಸಲಾಯಿತು. ಆದರೂ ಕೋರ್ಟ್ಗೆ ಹಾಜರಾಗಲಿಲ್ಲ ಎಂದು ದೂರು ಕೊಟ್ಟಿರುವ ಸುರೇಶ್ ಕಂಗಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
(ಏಜನ್ಸೀಸ್)