Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಚಿತ್ರಕ್ಕೆ ಆಹಾರವಾದ ಲೋಕಾಯುಕ್ತ ಹೆಗ್ಡೆ
ಬಾಲಿವುಡ್ನ ಸೃಜನಶೀಲ ನಿರ್ದೇಶಕ ದೀಪಂಕರ್ ಬ್ಯಾನರ್ಜಿ 'ಜಸ್ಟೀಸ್ ಹೆಗ್ಡೆ" ಎಂಬ ಪೊಲಿಟಿಕಲ್ ಥ್ರಿಲ್ಲರ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕರ್ನಾಟಕದ ರಾಜಕೀಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿರುವ ಅಕ್ರಮ ಗಣಿಗಾರಿಕೆ ವರದಿಯನ್ನು ಹಿನ್ನೆಲೆಯಾಗಿಟ್ಟುಕೊಂಡು ಈ ಚಿತ್ರದ ಕಥೆ ಹೆಣೆಯಲಾಗಿದೆ.
ಧರ್ಮೇಂದ್ರ ಅವರ ಪ್ರತಿಭಾವಂತ ನಟ ಅಭಯ್ ಡಿಯೋಲ್ ಅವರು ಸಂತೋಷ್ ಹೆಗ್ಡೆ ಪಾತ್ರವನ್ನು ಮಾಡಲಿದ್ದಾರೆ. ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಕರ್ನಾಟಕದಲ್ಲಷ್ಟೇ ಅಲ್ಲ ಉತ್ತರ ಭಾರತದಲ್ಲೂ ಹೆಸರುವಾಸಿ.
ಸುಪ್ರೀಂ ಕೋರ್ಟ್ನ ನಿವೃತ್ತ ಜಡ್ಜ್ ಆಗಿರುವ ಹೆಗ್ಡೆ ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ವೇದಿಕೆ ಯಲ್ಲೂ ಕಾಣಿಸಿಕೊಂಡು ಕೇಂದ್ರ ಸರ್ಕಾರಕ್ಕೂ ಚುರುಕು ಮುಟ್ಟಿಸಿದ್ದಾರೆ ಎಂದು ಬ್ಯಾನರ್ಜಿ ಹೇಳುತ್ತಾರೆ.
ಜಿಂದಗಿ ನಾ ಮಿಲೇ ದುಬಾರ ಚಿತ್ರದ ಅಭಿನಯಕ್ಕೆ ಉತ್ತಮ ಅಂಕ ಪಡೆದಿರುವ ಅಭಯ್, ಈ ಚಿತ್ರದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಾನು ಹೆಗ್ಡೆ ಅವರನ್ನು ಮೊದಲೇ ನೋಡಿದ್ದರೆ ಚೆನ್ನಾಗಿತ್ತು ಅನ್ನಿಸುತ್ತಿದೆ. ನೋಡಿದ್ದರೆ ಅವರ ಮ್ಯಾನರಿಸಂ ಸ್ವಲ್ಪ ಕಾಪಿ ಮಾಡ್ಬಹುದ್ದಿತ್ತು.
ನನ್ನ ನಿಜ ಜೀವನದ ಜೀವನ ಶೈಲಿಗೂ ಹೆಗ್ಡೆ ಅವರ ಬಗ್ಗೆ ನಾನು ತಿಳಿದುಕೊಂಡಿರುವುದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಇದು ತುಂಬಾ ಚಾಲೆಜಿಂಗ್ ಆಗಿದೆ ಎಂದು 34 ವರ್ಷದ ನಟ ಅಭಯ್ ಪ್ರತಿಕ್ರಿಯಿಸಿದ್ದಾರೆ.