Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಾಡಿಗಾರ್ಡ್' ಸಲ್ಮಾನ್ ಖಾನ್ ಮೇಲೆ FIR
ಬಾಲಿವುಡ್ ನಟ ಸಲ್ಮಾನ್ ಖಾನ್ ಹೆಜ್ಜೆ ಇಟ್ಟೆಡೆಯೆಲ್ಲಾ ಏನಾದರೂ ಕಿರಿಕ್ ಗ್ಯಾರಂಟಿ. ದೇಶದಲ್ಲಿ ಅಣ್ಣಾ ಹಜಾರೆ ಹವಾ ಹೆಚ್ಚಾಗಿದ್ದ ಕಾಲದಲ್ಲಿ ಸುಮ್ಮ ಸುಮ್ಮನೆ ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು.
ಈಗ ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಶೇರಾ ಹಾಗೂ ಐವರ ಮೇಲೆ ಕಾನ್ ಪುರದ ಪೊಲೀಸರು FIR ದಾಖಲಿಸಿದ್ದಾರೆ.
ಭ್ರಷ್ಟಾಚಾರ ವಿರೋಧಿ ಕಾರ್ಯಕರ್ತ ಒಮೆಂದ್ರ ಭರತ್ ಎಂಬವರ ಮೇಲೆ ಹಲ್ಲೆ ನಡೆಸಿದ ಆರೋಪವನ್ನು ಬಾಲಿವುಡ್ ನಟ ಸಲ್ಮಾನ್ ಮೇಲೆ ಹೊರೆಸಲಾಗಿದೆ. ಈ ಬಗ್ಗೆ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಕಡೆಯೊ ಪೊಲೀಸ್ ಠಾಣಾಧಿಕಾರಿ ಹೇಳಿದ್ದಾರೆ.
ಜನ್ ರಾಜ್ಯಪಾರ್ಟಿಯ ಕಾರ್ಯದರ್ಶಿಯಾಗಿರುವ ಒಮೇಂದ್ರ ಐಐಟಿಯ ಹಳೆ ವಿದ್ಯಾರ್ಥಿಯಾಗಿದ್ದು, ಕಾನ್ ಪುರಕ್ಕೆ ಬಂದಿದ್ದ ಸಲ್ಮಾನ್ ರನ್ನು ತಡೆದು ಅಣ್ಣಾ ಹಜಾರೆ ಬಗ್ಗೆ ಹೇಳಿಕೆ ನೀಡುವಂತೆ ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ಕಾರಿನೊಳಗೆ ಹೋದ ಸಲ್ಮಾನ್ ಗೆ ಗಾಂಧಿ ಟೋಪಿ ನೀಡಿ, ನಮ್ಮ ಜೊತೆ ಹೋರಾಟದಲ್ಲಿ ಪಾಲ್ಗೊಳ್ಳಿ ಎಂದು ಕಾರ್ಯಕರ್ತರು ಕೇಳಿಕೊಂಡರು. ಈ ಸಮಯದಲ್ಲಿ ಸಲ್ಮಾನ್ ಖಾನ್ ಅಂಗರಕ್ಷಕರು ಕಾರ್ಯಕರ್ತರನ್ನು ಹಿಗ್ಗಾಮುಗ್ಗಾ ಥಳಿಸಿ ದೂರಕ್ಕೆ ಓಡಿಸಿದರು.