Don't Miss!
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾವಣ ಸೆಟ್ಸ್ ನಲ್ಲಿ ಆನೆ ದಾಳಿಗೆ ಮಾವುತ ಬಲಿ
ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿರುವ 'ರಾವಣ' ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ.ರಾವಣ ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆಯೊಂದು ಮಾವುತನನ್ನು ಎಡ ದಂತದಿಂದ ತಿವಿದು ಸಾಯಿಸಿದ ದುರಂತ ಘಟನೆ ಗುರುವಾರ ನಡೆಯಿತು.
ಈ ಸಂದರ್ಭದಲ್ಲಿ ಚಿತ್ರದ ನಾಯಕಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸನಿಹದಲ್ಲೇ ಇದ್ದರು.ಅವರಿಬ್ಬರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಐಶ್, ಅಭಿ ದಂಪತಿಗಳು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.
ಮಣಿರತ್ನಂ ಅವರ 'ರಾವಣ' ಚಿತ್ರೀಕರಣ ಕೇರಳದ ದಟ್ಟ ಕಾನನಗಳಲ್ಲಿ ನಡೆಯುತ್ತಿದೆ. ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆ ಸೆಟ್ಸ್ ಗೆ ನುಗ್ಗಿ ಆ ದಾಂಧಲೆ ಸೃಷ್ಟಿಸಿತು. ಭಯಭೀತರಾದ ರಾವಣ ಚಿತ್ರತಂಡದಿಕ್ಕಾಪಾಲಾಗಿ ಓಟಕಿತ್ತಿತು.
ರಾವಣ ಚಿತ್ರದ ಭಾಗವಾಗಿ ಆನೆಯನ್ನೂ ಬಳಸಿಕೊಳ್ಳಲಾಗುತ್ತಿದೆ. ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆ ಮಾವುತನನ್ನು ತನ್ನ ಎಡ ದಂತದಿಂದ ತಿವುದು ಸಾಯಿಸಿದೆ. ಆನೆ ಸೃಷ್ಟಿಸಿದ ದಾಂಧಲೆಯಿಂದ ರಸ್ತೆಯಲ್ಲಿ ಅಡಚಣೆ ಉಂಟಾಗಿ ಚಿತ್ರದ ತಾರಾಗಣ, ಮಣಿರತ್ನಂ ಸೇರಿದಂತೆ ಉಳಿದವರು ತಾವು ಉಳಿದುಕೊಂಡ ಹೋಟೆಲ್ ಗೆ ಹೋಗಲು ಸಾಧ್ಯವಾಗಲಿಲ್ಲ.
ರಾವಣ ಚಿತ್ರದ ಸಿಬ್ಬಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅರಣ್ಯಾಧಿಕಾರಿಗಳು ಆನೆಯನ್ನು ಹದ್ದುಬಸ್ತಿಗೆ ತಂದು ಸರಪಳಿಗಳ ಮೂಲಕ ಬಂಧಿಸಿದರು. ಆನಂತರ ಚಿತ್ರತಂಡವನ್ನು ವಾಜಾಚಲ್ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಯಿತು.
(ದಟ್ಸ್ ಕನ್ನಡ ವಾರ್ತೆ)