Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಕುಂದ್ರಾ ವಿರುದ್ಧ 4 ಸಿಬ್ಬಂದಿಗಳು ಸಾಕ್ಷ್ಯ: ಪೊಲೀಸರಿಂದ ಮಾಹಿತಿ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ರಾಜ್ ಕುಂದ್ರಾ ವಿರುದ್ಧ ಪೊಲೀಸರ ಬಳಿ ಪ್ರಬಲ ಸಾಕ್ಷ್ಯಗಳಿವೆ ಎಂದು ಹೇಳಲಾಗಿದೆ.
ಇದೀಗ, ರಾಜ್ ಕುಂದ್ರಾ ಅವರ ವಯಾನ್ ಇಂಡಸ್ಟ್ರೀಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು ಸಿಬ್ಬಂದಿಗಳು ತಮ್ಮ ಮಾಲೀಕನ ವಿರುದ್ಧ ಸಾಕ್ಷ್ಯಗಳಾಗಿ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ರಾಜ್ ಕುಂದ್ರಾ ಬಂಧನ ಕೇಸ್: ಇಡಿ ಎಂಟ್ರಿ, ನಟಿ ಗೆಹನಾಗೆ ಸಮನ್ಸ್
ಈ ಕುರಿತು ಮುಂಬೈ ಪೊಲೀಸರು ಭಾನುವಾರ ಮಾಹಿತಿ ನೀಡಿರುವುದಾಗಿ ಎಎನ್ಐ ವರದಿ ಮಾಡಿದೆ. ''ರಾಜ್ ಕುಂದ್ರಾ ಈ ಕೇಸ್ನಲ್ಲಿ ತನಿಖೆಗೆ ಸಹಕರಿಸುತ್ತಿಲ್ಲ. ಬಹುಶಃ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಆತನ ವಿರುದ್ಧ ಸಾಕ್ಷ್ಯ ಹೇಳಿಕೆ ನೀಡುವ ಸಾಧ್ಯತೆ ಇದೆ'' ಎಂದು ಎಎನ್ಐ ವರದಿ ಮಾಡಿದೆ.
ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ಜುಲೈ 19 ರಂದು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಕೇಸ್ ಅಡಿಯಲ್ಲಿ 10 ಜನರನ್ನು ವಶಕ್ಕೆ ಪಡೆದುಕೊಂಡಿದ್ದು, ಜುಲೈ 27 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಪ್ರಕರಣದ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಪ್ರತಿಕ್ರಿಯಿಸಿದ್ದು "ರಾಜ್ ಕುಂದ್ರಾ ವಿಷಯದಲ್ಲಿ ತಪ್ಪು ಮಾಡಿದ ಎಲ್ಲರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದರು.
ಮುಂಬೈನಲ್ಲಿರುವ ರಾಜ್ ಕುಂದ್ರಾ ನಿವಾಸದ ಮೇಲೆ ದಾಳಿ ಮಾಡಿದ್ದ ಪೊಲೀಸರು, ಸ್ಥಳ ಮಹಜರು ಮಾಡಿದ್ದಾರೆ. ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ವೇಳೆ ಶಿಲ್ಪಾ ಶೆಟ್ಟಿ ಅವರ ಹೇಳಿಕೆ ಸಹ ಪಡೆಯಲಾಗಿದೆ.
Recommended Video
ತಿರುಗಿ
ಬಿದ್ದಿರುವ
ಪೂನಾಂ
ಪಾಂಡೆ-ಶೆರ್ಲಿನ್
ಚೋಪ್ರಾ
ಅಂದ್ಹಾಗೆ,
ಅಶ್ಲೀಲ
ವಿಡಿಯೋ
ನಿರ್ಮಾಣ
ಪ್ರಕರಣದಲ್ಲಿ
ನಟಿ
ಪೂನಂ
ಪಾಂಡೆ
ಮತ್ತು
ಶೆರ್ಲಿನ್
ಚೋಪ್ರಾ,
ಉದ್ಯಮಿ
ರಾಜ್
ಕುಂದ್ರಾ
ವಿರುದ್ಧ
ಹೇಳಿಕೆ
ನೀಡಿದ್ದಾರೆ.
ಅಶ್ಲೀಲ
ಸಿನಿಮಾಗಳಲ್ಲಿ
ನಟಿಸುವಂತೆ
ಬಲವಂತ
ಮಾಡಲಾಗಿತ್ತು
ಎಂದು
ದೂರಿದ್ದಾರೆ.
ಪೂನಂ
ಪಾಂಡೆ
ಖಾಸಗಿ
ಮಾಧ್ಯಮದ
ಜೊತೆ
ಪ್ರತಿಕ್ರಿಯಿಸಿ,
'ನನ್ನನ್ನು
ಅಶ್ಲೀಲ
ಜಗತ್ತಿಗೆ
ತಳ್ಳಿದ್ದೇ
ರಾಜ್
ಕುಂದ್ರಾ'
ಎಂದಿದ್ದಾರೆ.