Don't Miss!
- News ನಾಲ್ಕು ಗೋಡೆಗಳ ಮಧ್ಯೆ ಆಗಿರುವ ಚರ್ಚೆ ಬಹಿರಂಗವಾಗಿ ಹೇಳೋದಕ್ಕೆ ಆಗಲ್ಲ: ಎಂ.ಪಿ.ರೇಣುಕಾಚಾರ್ಯ ಹೀಗೆ ಹೇಳಿದ್ಯಾಕೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಪ್ರಕರಣದಲ್ಲಿ ಸುಳ್ಳು ಹರಡಲು 80,000 ನಕಲಿ ಸಾಮಾಜಿಕ ಜಾಲತಾಣ ಖಾತೆ ಸೃಷ್ಠಿ!
ಜನರ ಅಭಿಪ್ರಾಯ ರೂಪಿಸುವುದರಲ್ಲಿ ಸಾಮಾಜಿಕ ಜಾಲತಾಣ ಬಹುದೊಡ್ಡ ಪಾತ್ರ ವಹಿಸುತ್ತಿದೆ. ರಾಜಕೀಯ ವಿರಲಿ, ಯಾವುದೇ ನಿರ್ದಿಷ್ಟ ಘಟನೆ ಇರಲಿ ಆ ಬಗ್ಗೆ ಸಾಮಾನ್ಯರ ಅಭಿಪ್ರಾಯ ತಿದ್ದಲು ಸಾಮಾಜಿಕ ಜಾಲತಾಣ ಬಳಕೆ ಆಗುತ್ತಿದೆ.
ಸುಶಾಂತ್ ಸಾವು ಪ್ರಕರಣದಲ್ಲಿ, ಸುಶಾಂತ್ ಅನ್ನು ಕೊಲೆ ಮಾಡಲಾಗಿದೆ ಎಂದು ಸುಳ್ಳು ಹರಡಲು, ಮುಂಬೈ ಪೊಲೀಸರು ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಅಭಿಪ್ರಾಯ ಬರುವಂತೆ ಮಾಡಲು ಬರೋಬ್ಬರಿ 80,000 ನಕಲಿ ಸಾಮಾಜಿಕ ಜಾಲತಾಣ ಖಾತೆ ಬಳಸಿಕೊಳ್ಳಲಾಗಿತ್ತಂತೆ.
ಕೊಲೆಯಾಗಿಲ್ಲ ಸುಶಾಂತ್ ಸಿಂಗ್, ರಿಯಾ ಮೇಲೂ ಅನುಮಾನವಿಲ್ಲ: ತನಿಖಾ ಕೋನ ಬದಲು
ಹೌದು, ಸುಶಾಂತ್ ಸಿಂಗ್ ಪ್ರಕರಣದಲ್ಲಿ ಸುಳ್ಳನ್ನು ಸತ್ಯವೆಂದು ಜನರು ನಂಬುವಂತೆ ಮಾಡಲು ಈ 80,000 ನಕಲಿ ಖಾತೆಗಳನ್ನು ಬಳಸಿಕೊಳ್ಳಲಾಗಿದೆ. ಆ ಕಾರ್ಯದಲ್ಲಿ ಬಹುತೇಕ ಯಶಸ್ವಿಯೂ ಆದಂತಿದೆ.
ಪೊಲೀಸರ ಬಗ್ಗೆ ಅಪನಂಬಿಕೆ ಉಂಟುಮಾಡುವ ಯತ್ನ
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರ ಬಗ್ಗೆ ಅಪನಂಬಿಕೆ ಉಂಟಾಗುವಂತೆ ಮಾಡುವುದು, ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಬದಲಾಗಿ ಆತನನ್ನು ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣ ಬಳಸುವವರನ್ನು ನಂಬಿಸುವ ಕಾರ್ಯವನ್ನು ಈ ನಕಲಿ ಖಾತೆ ಬಳಕೆದಾರರು ಮಾಡುತ್ತಿದ್ದರು.
ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು
ಇದೀಗ ಈ ಪ್ರಕರಣದ ವಿರುದ್ಧ ಮುಂಬೈ ಪೊಲೀಸರು ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೈಬರ್ ಪೊಲೀಸರ ನೆರವು ಸಹ ಪಡೆದುಕೊಂಡಿದ್ದು, ಮೂಲ ಸೂತ್ರಧಾರಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಪೊಲೀಸರು.
ನಟಿ ರಿಯಾ ಚಕ್ರವರ್ತಿಗೆ ಜಾಮೀನು ನೀಡಿದ ಬಾಂಬೆ ಹೈ ಕೋರ್ಟ್
Recommended Video
ಉದ್ದೇಶಪೂರ್ವಕವಾಗಿ ಮುಂಬೈ ಪೊಲೀಸರ ಮೇಲೆ ದಾಳಿ
ಕೊರೊನಾ ಕಾರಣಕ್ಕೆ 84 ಮುಂಬೈ ಪೊಲೀಸರು ಅಸುನೀಗಿದ್ದಾರೆ, 6000 ಮಂದಿ ಕೊರೊನಾಕ್ಕೆ ತುತ್ತಾಗಿದ್ದಾರೆ. ಇಂಥಹಾ ಹೊತ್ತಿನಲ್ಲಿ ನಿರ್ದಿಷ್ಟವಾಗಿ ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡೇ ನಕಲಿ ಖಾತೆಗಳ ಮೂಲಕ ಸುಳ್ಳು ಹರಡಲಾಗಿದೆ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನು ಅಡಿಗೆ ತರಲಾಗುವುದು ಎಂದಿದ್ದಾರೆ ಅವರು.