Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತೂ ಈ ಬಾರಿ ಒಳ್ಳೆ ಕೆಲಸ ಮಾಡಿದ್ದಾರೆ ಆಮಿರ್ ಖಾನ್
ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ದೇಶ ತೊರೆಯುವ ಮಾತುಗಳನ್ನಾಡಿದ್ದ 'ಪಿ.ಕೆ' ಚಿತ್ರದ ಖ್ಯಾತಿಯ ಬಾಲಿವುಡ್ ನಟ ಅಮೀರ್ ಖಾನ್ ಅವರು ಇಡೀ ದೇಶದಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿ, ತದನಂತರ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿ ವಿವಾದದಿಂದ ಮುಕ್ತರಾಗಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ.
ಇದೀಗ ಹೊಸ ಸುದ್ದಿ ಏನಪ್ಪಾ ಅಂದರೆ ಅದೇ ಅಮೀರ್ ಖಾನ್ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವಂತಹ ಕೆಲಸ ಮಾಡುತ್ತಿದ್ದಾರೆ. ಎಲ್ಲೆಡೆ ಬರ ಬಂದು ನೀರು ಕಾಣದೇ ತತ್ತರಿಸುತ್ತಿರುವ ಹಳ್ಳಿಗಳ ಕಡೆ ಅಮೀರ್ ಖಾನ್ ಅವರು ತಮ್ಮ ದೃಷ್ಟಿ ನೆಟ್ಟಿದ್ದಾರೆ.[ಅಮೀರ್ ವಿರುದ್ಧ ಟ್ವಿಟ್ಟರ್ ನಲ್ಲಿ ರೊಚ್ಚಿಗೆದ್ದ ಸ್ಯಾಂಡಲ್ ವುಡ್ ಸ್ಟಾರ್ಸ್]
ಹೌದು ಖ್ಯಾತ ನಟ ಅಮೀರ್ ಖಾನ್ ಅವರು ಮಹಾರಾಷ್ಟ್ರದ 2 ಬರಪೀಡಿತ ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರದ 'ತಾಲ್' ಮತ್ತು 'ಕೋರೆಗಾಂವ್' ಎಂಬ ಎರಡು ಹಳ್ಳಿಗಳನ್ನು ಅಮೀರ್ ಖಾನ್ ಅವರು ದತ್ತು ತೆಗೆದುಕೊಂಡು ಅಲ್ಲಿನ ಜನರಿಗೆ ನೀರಿನ ಸಂರಕ್ಷಣೆ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.[ಸನ್ನಿ ಜೊತೆ ನನಗೆ ಕೆಲಸ ಮಾಡಲು ಇಷ್ಟ ಎಂದವರಾರು?]
ಇತ್ತೀಚೆಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ನಟ ಅಮೀರ್ ಖಾನ್ ಅವರು ತಮ್ಮ 'ಪಾನಿ' ಎಂಬ ಫೌಂಡೇಶನ್ ವತಿಯಿಂದ ಜಲ ಸಂರಕ್ಷಣೆ ಹೇಗೆ ಮಾಡಬೇಕು, ಅದರಿಂದಾಗುವ ಉಪಯೋಗಗಳ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.[ಚಿತ್ರಪುಟ; ನಿಮ್ಮನ್ನ ಬೆಕ್ಕಸ ಬೆರಗಾಗಿಸುವ ಆಮಿರ್ ಖಾನ್ ಹೊಸ ಲುಕ್!]
ಈ ಹಿಂದೆ 2001 ರಲ್ಲಿ ಅಮೀರ್ ಖಾನ್ ಅವರು ಭೂಕಂಪಕ್ಕೆ ತುತ್ತಾದ ಗುಜರಾತ್ ನ ಭುಜ್ ಗ್ರಾಮವನ್ನು ದತ್ತು ತೆಗೆದುಕೊಂಡಿದ್ದರು. ಇನ್ನು ನಟ ಅಕ್ಷಯ್ ಕುಮಾರ್ ಮತ್ತು ನಾನಾ ಪಾಟೇಕರ್ ಅವರು ಕೂಡ ಬರಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರಿಗೆ ಸಹಾಯ ಮಾಡುತ್ತಿದ್ದಾರೆ.