Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತೂ ಈ ಬಾರಿ ಒಳ್ಳೆ ಕೆಲಸ ಮಾಡಿದ್ದಾರೆ ಆಮಿರ್ ಖಾನ್
ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ದೇಶ ತೊರೆಯುವ ಮಾತುಗಳನ್ನಾಡಿದ್ದ 'ಪಿ.ಕೆ' ಚಿತ್ರದ ಖ್ಯಾತಿಯ ಬಾಲಿವುಡ್ ನಟ ಅಮೀರ್ ಖಾನ್ ಅವರು ಇಡೀ ದೇಶದಾದ್ಯಂತ ವ್ಯಾಪಕ ಟೀಕೆಗೆ ಒಳಗಾಗಿ, ತದನಂತರ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿ ವಿವಾದದಿಂದ ಮುಕ್ತರಾಗಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ.
ಇದೀಗ ಹೊಸ ಸುದ್ದಿ ಏನಪ್ಪಾ ಅಂದರೆ ಅದೇ ಅಮೀರ್ ಖಾನ್ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವಂತಹ ಕೆಲಸ ಮಾಡುತ್ತಿದ್ದಾರೆ. ಎಲ್ಲೆಡೆ ಬರ ಬಂದು ನೀರು ಕಾಣದೇ ತತ್ತರಿಸುತ್ತಿರುವ ಹಳ್ಳಿಗಳ ಕಡೆ ಅಮೀರ್ ಖಾನ್ ಅವರು ತಮ್ಮ ದೃಷ್ಟಿ ನೆಟ್ಟಿದ್ದಾರೆ.[ಅಮೀರ್ ವಿರುದ್ಧ ಟ್ವಿಟ್ಟರ್ ನಲ್ಲಿ ರೊಚ್ಚಿಗೆದ್ದ ಸ್ಯಾಂಡಲ್ ವುಡ್ ಸ್ಟಾರ್ಸ್]
ಹೌದು ಖ್ಯಾತ ನಟ ಅಮೀರ್ ಖಾನ್ ಅವರು ಮಹಾರಾಷ್ಟ್ರದ 2 ಬರಪೀಡಿತ ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರದ 'ತಾಲ್' ಮತ್ತು 'ಕೋರೆಗಾಂವ್' ಎಂಬ ಎರಡು ಹಳ್ಳಿಗಳನ್ನು ಅಮೀರ್ ಖಾನ್ ಅವರು ದತ್ತು ತೆಗೆದುಕೊಂಡು ಅಲ್ಲಿನ ಜನರಿಗೆ ನೀರಿನ ಸಂರಕ್ಷಣೆ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.[ಸನ್ನಿ ಜೊತೆ ನನಗೆ ಕೆಲಸ ಮಾಡಲು ಇಷ್ಟ ಎಂದವರಾರು?]
ಇತ್ತೀಚೆಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ನಟ ಅಮೀರ್ ಖಾನ್ ಅವರು ತಮ್ಮ 'ಪಾನಿ' ಎಂಬ ಫೌಂಡೇಶನ್ ವತಿಯಿಂದ ಜಲ ಸಂರಕ್ಷಣೆ ಹೇಗೆ ಮಾಡಬೇಕು, ಅದರಿಂದಾಗುವ ಉಪಯೋಗಗಳ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.[ಚಿತ್ರಪುಟ; ನಿಮ್ಮನ್ನ ಬೆಕ್ಕಸ ಬೆರಗಾಗಿಸುವ ಆಮಿರ್ ಖಾನ್ ಹೊಸ ಲುಕ್!]
ಈ ಹಿಂದೆ 2001 ರಲ್ಲಿ ಅಮೀರ್ ಖಾನ್ ಅವರು ಭೂಕಂಪಕ್ಕೆ ತುತ್ತಾದ ಗುಜರಾತ್ ನ ಭುಜ್ ಗ್ರಾಮವನ್ನು ದತ್ತು ತೆಗೆದುಕೊಂಡಿದ್ದರು. ಇನ್ನು ನಟ ಅಕ್ಷಯ್ ಕುಮಾರ್ ಮತ್ತು ನಾನಾ ಪಾಟೇಕರ್ ಅವರು ಕೂಡ ಬರಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರಿಗೆ ಸಹಾಯ ಮಾಡುತ್ತಿದ್ದಾರೆ.