Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಚ್1ಎನ್1 ಸೋಂಕಿನಿಂದ ಬಳಲುತ್ತಿರುವ ಅಮೀರ್ ಖಾನ್ ದಂಪತಿ
ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಮತ್ತು ಪತ್ನಿ ಕಿರಣ್ ರಾವ್ ಇಬ್ಬರಿಗೂ ಎಚ್1ಎನ್1 ಸೋಂಕು ತಗುಲಿದ್ದು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅವರಿಗೆ ಮುಂಬೈನ ಅವರ ನಿವಾಸದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಅಮೀರ್ ಖಾನ್ ರವರು ಅನಾರೋಗ್ಯದ ಕಾರಣ 'ಸತ್ಯಮೇವ ಜಯತೇ ವಾಟರ್ ಕಪ್' ಪ್ರಶಸ್ತಿ ಸಮಾರಂಭಕ್ಕೂ ಗೈರಾಗಿದ್ದು, ಬದಲಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಲೈವ್ ನಲ್ಲಿ 'ತಮಗೆ ಎಚ್1ಎನ್1 ಹಂದಿಜ್ವರದ ಸೋಂಕಿನ ಕಾರಣ ಕಾರ್ಯಕ್ರಮಕ್ಕೆ ಬರಲಾಗಿಲ್ಲ. ಇದು ಅತೀ ಸಂತೋಷದ ದಿನವಾದರೂ ದುಃಖವಾಗುತ್ತಿದೆ. ವರ್ಷಗಳ ಕಾಲ ಕಷ್ಟಪಟ್ಟು ದುಡಿದರು ಸಂಭ್ರಮಿಸುವ ದಿನ ಆರೋಗ್ಯ ಕೆಟ್ಟಿದೆ. ಮನೆಯಿಂದ ಹೊರಗೆ ಹೋಗದಿರಲು ವೈದ್ಯರು ಸೂಚಿಸಿರುವ ಕಾರಣ ಈ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲ' ಎಂದು ತಿಳಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ನಲ್ಲಿ ಅಮೀರ್ ಖಾನ್ ಜೊತೆಗೆ ಪತ್ನಿ ಕಿರಣ್ ರಾವ್ ಸಹ ಇದ್ದರು.
ಅಂದಹಾಗೆ ಪಾನಿ ಫೌಂಡೇಶನ್ ಅಯೋಜಿಸಿದ್ದ 'ಸತ್ಯಮೇವ ಜಯತೇ ವಾಟರ್ ಕಪ್ 2017' ಪ್ರಶಸ್ತಿ ಸಮಾರಂಭ ಕಾರ್ಯಕ್ರಮಕ್ಕೆ ಅಮೀರ್ ಖಾನ್ ಪರವಾಗಿ ನಟ ಶಾರುಖ್ ಖಾನ್ ಅತಿಥಿಯಾಗಿ ಆಗಮಿಸಿದ್ದರು. ಶಾರುಖ್ ಖಾನ್ ಕಾರ್ಯಕ್ರಮದಲ್ಲಿ ಮಾತನಾಡಿ, 'ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿದ್ದಕ್ಕಾಗಿ ಅಮೀರ್ ಗೆ ಧನ್ಯವಾದಗಳು' ಎಂದು ಸಹ ಹೇಳಿದ್ದಾರೆ.