Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ಬಂದ ಆಮಿರ್ ಖಾನ್: 25 ಲಕ್ಷ ರೂ. ದೇಣಿಗೆ!
ಕಳೆದ ಕೆಲವು ದಿನಗಳಿಂದ ಅಸ್ಸಾಂ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹದ ಸ್ಥಿತಿ ನಿರ್ಮಾಣ ಆಗಿದೆ. ಕಳೆದೆರಡು ದಿನಗಳಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ, ಪರಿಸ್ಥಿತಿ ಮಾತ್ರ ಇನ್ನೂ ಸುಧಾರಿಸಿಲ್ಲ. ಹೀಗಾಗಿ ಈಗಾಗಲೇ ಸುಮಾರು 127ಕ್ಕೂ ಅಧಿಕ ಮಂದಿ ಈ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಹಲವು ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.
ಅಸ್ಸಾಂನ ಬಜಾಲಿ, ಬಕ್ಸಾ, ಬರ್ಪೇಟಾ, ಕ್ಯಾಚರ್, ಚಿರಾಂಗ್, ದರ್ರಾಂಗ್, ಧೇಮಾಜಿ, ಧುಬ್ರಿ, ದಿಬ್ರುಗಢ, ಗೋಲ್ಪಾರಾ, ಗೋಲಾಘಾಟ್, ಹೈಲಕಂಡಿ, ನಲ್ಬರಿ, ಸೋನಿತ್ಪುರ್, ದಕ್ಷಿಣ ಸಲ್ಮಾರಾ, ತಮುಲ್ಪುರ್ ಮತ್ತು ಉದಲ್ಗುರಿ ಜಿಲ್ಲೆಗಳಲ್ಲಿ 22,21,500 ಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿವೆ. ಈ ಮಧ್ಯೆ ಉದ್ಯಮಿಗಳು ಹಾಗೂ ಸೆಲೆಬ್ರೆಟಿಗಳು ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ಬಂದಿದ್ದಾರೆ.
ಅಮೀರ್ ಖಾನ್ ಸಿನಿಮಾದ ದೃಶ್ಯ ಪೋಸ್ಟ್ ಮಾಡಿ 'ಹಿಂದೂ ಆಗಿರುವುದಕ್ಕೆ ಹೆಮ್ಮೆ' ಎಂದ ಕಂಗನಾ!
ಪ್ರವಾಹ ಪೀಡಿತರಿಗೆ 25 ಲಕ್ಷ ರೂ. ನೀಡಿದ ಆಮಿರ್ ಖಾನ್
ಆಮಿರ್ ಖಾನ್ ಸಿನಿಮಾಗಳಷ್ಟೇ ಅಲ್ಲ. ಸಿನಿಮಾಗಳಲ್ಲಿ ನಟಿಸುವುದರ ಜೊತೆ ಜೊತೆಗೆ ಸಾಮಾಜಿಕ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಕಷ್ಟದ ಸಂದರ್ಭಗಳಲ್ಲಿ ಆಗಾಗ ಸಹಾಯಕ್ಕೆ ಹಾಗೂ ನೆರವಿಗೆ ಧಾಮಿಸುತ್ತಿದ್ದಾರೆ. ಈ ಬಾರಿ ಕೂಡ ಅಸ್ಸಾಂನ ಪ್ರವಾಹ ಪೀಡಿತ ಜನರಿಗೆ ನೆರವಾಗಲು ಅಮೀರ್ ಖಾನ್ ಮುಂದಾಗಿದ್ದಾರೆ.
ಅಮಿರ್ ಖಾನ್ ಅಸ್ಸಾಂ ರಾಜ್ಯ ಸರ್ಕಾರದ ಜೊತೆ ಕೈ ಜೋಡಿಸಿದ್ದು, 25 ಲಕ್ಷ ರೂಪಾಯಿಯನ್ನು ಅಸ್ಸಾಂ ಸಿಎಂ ರಿಲೀಫ್ ಫಂಡ್ಗೆ ನೀಡಿದ್ದಾರೆ. ಈ ಹಿಂದೆ ಕೂಡ ಆಮಿರ್ ಖಾನ್ ಇಂತಹ ಸಾಮಾಜಿಕ ಕೆಲಸಗಳಿಗೆ ನೆರವಾಗಿದ್ದರು. ಆಮಿರ್ ನೆರವಿಗೆ ಧಾವಿಸಿದ್ದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಟ್ವೀಟ್ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ಆಮಿರ್ ಖಾನ್ 'ಲಾಲ್ ಸಿಂಗ್ ಚಡ್ಡ' ಸಿನಿಮಾ 'ಕೆಜಿಎಫ್ 2' ದಾಖಲೆ ಉಡೀಸ್ ಮಾಡುತ್ತಾ? ಬಾಲಿವುಡ್ ಹೇಳ್ತಿರೋದೇನು?
ಆಮಿರ್ ಖಾನ್ಗೆ ಅಸ್ಸಾಂ ಸಿಎಂ ಧನ್ಯವಾದ
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಇಂತಹ ಸಂಕಷ್ಟದ ಸಮಯದಲ್ಲಿ ಆಮಿರ್ ನೆರವಿಗೆ ಬಂದಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. " ಬಾಲಿವುಡ್ ನಟ ಆಮಿರ್ ಖಾನ್ ಪ್ರವಾಹಕ್ಕೆ ಸಿಲುಕಿರುವ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಅವರು 25 ಲಕ್ಷ ಸಿಎಂ ರಿಲೀಫ್ ಫಂಡ್ಗೆ ನೀಡುವ ಮೂಲಕ ನೆರವಾಗಿದ್ದಾರೆ. ಅವರ ಕಾಳಜಿ ಹಾಗೂ ಉದಾರತೆಯನ್ನು ತೋರಿದ್ದಕ್ಕಾಗಿ ಧನ್ಯವಾದಗಳು." ಎಂದು ಟ್ವೀಟ್ ಮಾಡಿದ್ದಾರೆ.
Eminent Bollywood actor Amir Khan extended a helping hand to the flood-affected people of our State by making a generous contribution of ₹25 lakh towards CM Relief Fund.
— Himanta Biswa Sarma (@himantabiswa) June 27, 2022
My sincere gratitude for his concern and act of generosity.
ಇನ್ನು ಸಿನಿಮಾ ವಿಷಯಕ್ಕೆ ಬರುವುದಾದರೇ, ಆಮಿರ್ ಖಾನ್ ಅಭಿನಯದ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆಮಿರ್ ಜೊತೆ ಕರೀನಾ ಕಪೂರ್, ಟಾಲಿವುಡ್ ನಟ ನಾಗಚೈತನ್ಯ ಕೂಡ ನಟಿಸಿದ್ದಾರೆ. ಇದು ಹಾಲಿವುಡ್ನ 'ಫಾರೆಸ್ಟ್ ಗಂಪ್' ಸಿನಿಮಾ ರಿಮೇಕ್ ಆಗಿದ್ದು,ಆಗಸ್ಟ್ 11ಕ್ಕೆ ಬಿಡುಗಡೆಯಾಗುತ್ತಿದೆ.